ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಮಗನ ಶವ ಹೊರತೆಗೆದ ತಂದೆ

ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ
Last Updated 13 ಆಗಸ್ಟ್ 2019, 10:57 IST
ಅಕ್ಷರ ಗಾತ್ರ

ಬೈಲಹೊಂಗಲ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮಗನ ಶವವನ್ನು ತಂದೆಯೇ ಕೆಸರಿನಿಂದ ಹೊರತೆಗೆದು, ಅಪ್ಪಿಕೊಂಡು ರೋದಿಸಿದ ಘಟನೆ ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ಹಳ್ಳದ ಬಳಿಯ ಜಮೀನಿನಲ್ಲಿ ಸೋಮವಾರ ನಡೆದಿದೆ.

ಸಂಗಮೇಶ ಬಸಪ್ಪ ಹುಂಬಿ (22) ಮೃತರು.

ಗ್ರಾಮ ಸಮೀಪದ ಸಂಗೊಳ್ಳಿ–ಜಿಡ್ಡಿ ಹಳ್ಳದ ಬಳಿಯ ತಮ್ಮ ಹೊಲಕ್ಕೆ ಮೇವು ತರಲು ಶನಿವಾರ ಹೋಗಿದ್ದರು. ಸಂಜೆಯಾದರೂ ವಾಪಸಾಗಿರಲಿಲ್ಲ. ನಾಪತ್ತೆಯಾದ ಬಗ್ಗೆ ಪೋಷಕರು ದೊಡವಾಡ ಠಾಣೆಗೆ ದೂರು ನೀಡಿದ್ದರು. ಸೋಮವಾರ ಬೆಳಿಗ್ಗೆ ಯುವಕನ ಚಿಕ್ಕಪ್ಪ ಹಳ್ಳದಲ್ಲಿ ಗಿಡದಲ್ಲಿ ಶವವೊಂದು ಸಿಕ್ಕಿ ಹಾಕಿಕೊಂಡಿರುವುದನ್ನು ಗಮನಿಸಿ, ಮನೆಯವರಿಗೆ ಸುದ್ದಿ ತಿಳಿಸಿದ್ದಾರೆ. ದೌಡಾಯಿಸಿದ ತಂದೆ ಬಸಪ್ಪ ಅಳುತ್ತಲೇ ಶವವತ್ತು ಎತ್ತುಕೊಂಡು ಬಂದ ದೃಶ್ಯ, ಅಲ್ಲಿದ್ದವರ ಕಣ್ಣಾಲಿಗಳು ತುಂಬುವಂತೆ ಮಾಡಿದವು. ತಾಯಿ ಹಾಗೂ ಪೋಷಕರ ರೋದನೆ ಮುಗಿಲು ಮುಟ್ಟಿತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದೆ.

ತಹಶೀಲ್ದಾರ್ ಡಾ.ದೊಡ್ಡಪ್ಪ ಹೂಗಾರ, ಡಿವೈಎಸ್ಪಿ ಕರುಣಾಕರ ಶೆಟ್ಟಿ, ದೊಡವಾಡ ಪಿಎಸ್‍ಐ ಅನಿಲ ಅಮ್ಮಿನಭಾವಿ ಸ್ಥಳಕ್ಕೆ ಭೇಟಿ ನೀಡಿದ್ದರು. ಶಾಸಕ ಮಹಾಂತೇಶ ಕೌಜಲಗಿ ಕುಟುಂಬದವರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT