ಚಿಕ್ಕಮಗಳೂರು: ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಇದೇ 14ರಂದು ಬೆಳಿಗ್ಗೆ 11 ಗಂಟೆಗೆ ಫೇಸ್ಬುಕ್ ಲೈವ್ನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.
ಪರೀಕ್ಷೆಯ ಭಯ, ಗೊಂದಲ, ತಯಾರಿ ಬಗ್ಗೆ ಪರೀಕ್ಷಾರ್ಥಿಗಳಿಗೆ ಮಾರ್ಗದರ್ಶನ ನೀಡುವರು. ‘ಕನಸುಗಳ ಇನ್ಫಿನಿಟಿ’ ಫೇಸ್ಬುಕ್ ಪುಟದಲ್ಲಿ ವಿದ್ಯಾರ್ಥಿಗಳು ಸಂವಾದ ನಡೆಸಬಹುದು ಎಂದು ಪ್ರಕಟಣೆ ತಿಳಿಸಿದೆ.