<p><strong>ರಾಯಚೂರು: </strong>ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್)ದ ನಿರ್ವಹಣೆಯ ಹೊಣೆಯನ್ನು ಕರ್ನಾಟಕ ವಿದ್ಯುತ್ ನಿಗಮವು 30 ತಿಂಗಳ ಅವಧಿಗೆಹೈದರಾಬಾದ್ನ ‘ಪವರ್ ಮೇಕ್’ ಖಾಸಗಿ ಕಂಪನಿಗೆ ವಹಿಸಿದೆ.</p>.<p>ಒಪ್ಪಂದದ ಪ್ರಕಾರ, ಪವರ್ ಮೇಕ್ ಕಂಪನಿಯೇ ಕಾರ್ಮಿಕರು–ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ. ವಿದ್ಯುತ್ ಉತ್ಪಾದನೆಯ ಸಂಪೂರ್ಣ ಹೊಣೆ ಈ ಕಂಪನಿಯದ್ದಾಗಿದೆ. ಕಲ್ಲಿದ್ದಲು ಖರೀದಿ, ಮೇಲುಸ್ತುವಾರಿ ಹಾಗೂ ವಿದ್ಯುತ್ ಮಾರಾಟದ ಜವಾಬ್ದಾರಿಯನ್ನು ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ನೋಡಿಕೊಳ್ಳಲಿದೆ.ಮೇ 8 ರಂದು ಒಪ್ಪಂದಕ್ಕೆ ಒಪ್ಪಿಗೆ ನೀಡಲಾಗಿದೆ.</p>.<p>2,500 ಎಕರೆ ಭೂಮಿಯಲ್ಲಿ ₹ 1,300 ಕೋಟಿ ವೆಚ್ಚದಲ್ಲಿ ಈ ಸ್ಥಾವರ ಸ್ಥಾಪಿಸಿದ್ದು,2017 ರಿಂದ ಕಾರ್ಯಾರಂಭ ಮಾಡಿದೆ. ತಲಾ 800 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯದ ಎರಡು ಘಟಕಗಳು ಇವೆ.</p>.<p>ವಿದ್ಯುತ್ ಸ್ಥಾವರದ ನಿರ್ವಹಣೆಯನ್ನು ಹೊರಗುತ್ತಿಗೆ ವಹಿಸಲು 2018 ರಲ್ಲಿಯೇ ಕರ್ನಾಟಕ ವಿದ್ಯುತ್ ನಿಗಮ ನಿರ್ಧರಿಸಿತ್ತು. ಆದರೆ, ಕಾರ್ಮಿಕ ಸಂಘಟನೆಗಳು ಮತ್ತು ವೈಟಿಪಿಎಸ್ಗೆ ಭೂಮಿ ನೀಡಿರುವ ರೈತರು ವಿರೋಧ ವ್ಯಕ್ತಪಡಿಸಿದ್ದರಿಂದಒಪ್ಪಂದ ನನೆಗುದಿಗೆ ಬಿದ್ದಿತ್ತು.</p>.<p>ಗುತ್ತಿಗೆ ಆಧಾರದಲ್ಲಿ ನೇಮಕ ವಾಗಿದ್ದ 300 ಕಾರ್ಮಿಕರನ್ನು ಈ ಹಿಂದೆಯೇ ತೆಗೆದು ಹಾಕಲಾಗಿದೆ. ರಾಯಚೂರುಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್ಟಿಪಿಎಸ್)ದ ಕೆಲ ಸಿಬ್ಬಂದಿಯನ್ನು ಇಲ್ಲಿಗೆ ನಿಯೋಜಿಸಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.</p>.<p>ಆಗ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು 2019 ರ ಆರಂಭದಲ್ಲಿ ಗ್ರಾಮ ವಾಸ್ತವ್ಯಕ್ಕಾಗಿ ಜಿಲ್ಲೆಗೆ ಬಂದಾಗ ಕೆಲಸ ಕಳೆದುಕೊಂಡಿದ್ದ ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿ, ಸಂಚಾರಕ್ಕೆ ಅಡ್ಡಿಪಡಿಸಿದ್ದು ಸುದ್ದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್)ದ ನಿರ್ವಹಣೆಯ ಹೊಣೆಯನ್ನು ಕರ್ನಾಟಕ ವಿದ್ಯುತ್ ನಿಗಮವು 30 ತಿಂಗಳ ಅವಧಿಗೆಹೈದರಾಬಾದ್ನ ‘ಪವರ್ ಮೇಕ್’ ಖಾಸಗಿ ಕಂಪನಿಗೆ ವಹಿಸಿದೆ.</p>.<p>ಒಪ್ಪಂದದ ಪ್ರಕಾರ, ಪವರ್ ಮೇಕ್ ಕಂಪನಿಯೇ ಕಾರ್ಮಿಕರು–ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ. ವಿದ್ಯುತ್ ಉತ್ಪಾದನೆಯ ಸಂಪೂರ್ಣ ಹೊಣೆ ಈ ಕಂಪನಿಯದ್ದಾಗಿದೆ. ಕಲ್ಲಿದ್ದಲು ಖರೀದಿ, ಮೇಲುಸ್ತುವಾರಿ ಹಾಗೂ ವಿದ್ಯುತ್ ಮಾರಾಟದ ಜವಾಬ್ದಾರಿಯನ್ನು ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ನೋಡಿಕೊಳ್ಳಲಿದೆ.ಮೇ 8 ರಂದು ಒಪ್ಪಂದಕ್ಕೆ ಒಪ್ಪಿಗೆ ನೀಡಲಾಗಿದೆ.</p>.<p>2,500 ಎಕರೆ ಭೂಮಿಯಲ್ಲಿ ₹ 1,300 ಕೋಟಿ ವೆಚ್ಚದಲ್ಲಿ ಈ ಸ್ಥಾವರ ಸ್ಥಾಪಿಸಿದ್ದು,2017 ರಿಂದ ಕಾರ್ಯಾರಂಭ ಮಾಡಿದೆ. ತಲಾ 800 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯದ ಎರಡು ಘಟಕಗಳು ಇವೆ.</p>.<p>ವಿದ್ಯುತ್ ಸ್ಥಾವರದ ನಿರ್ವಹಣೆಯನ್ನು ಹೊರಗುತ್ತಿಗೆ ವಹಿಸಲು 2018 ರಲ್ಲಿಯೇ ಕರ್ನಾಟಕ ವಿದ್ಯುತ್ ನಿಗಮ ನಿರ್ಧರಿಸಿತ್ತು. ಆದರೆ, ಕಾರ್ಮಿಕ ಸಂಘಟನೆಗಳು ಮತ್ತು ವೈಟಿಪಿಎಸ್ಗೆ ಭೂಮಿ ನೀಡಿರುವ ರೈತರು ವಿರೋಧ ವ್ಯಕ್ತಪಡಿಸಿದ್ದರಿಂದಒಪ್ಪಂದ ನನೆಗುದಿಗೆ ಬಿದ್ದಿತ್ತು.</p>.<p>ಗುತ್ತಿಗೆ ಆಧಾರದಲ್ಲಿ ನೇಮಕ ವಾಗಿದ್ದ 300 ಕಾರ್ಮಿಕರನ್ನು ಈ ಹಿಂದೆಯೇ ತೆಗೆದು ಹಾಕಲಾಗಿದೆ. ರಾಯಚೂರುಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್ಟಿಪಿಎಸ್)ದ ಕೆಲ ಸಿಬ್ಬಂದಿಯನ್ನು ಇಲ್ಲಿಗೆ ನಿಯೋಜಿಸಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.</p>.<p>ಆಗ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು 2019 ರ ಆರಂಭದಲ್ಲಿ ಗ್ರಾಮ ವಾಸ್ತವ್ಯಕ್ಕಾಗಿ ಜಿಲ್ಲೆಗೆ ಬಂದಾಗ ಕೆಲಸ ಕಳೆದುಕೊಂಡಿದ್ದ ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿ, ಸಂಚಾರಕ್ಕೆ ಅಡ್ಡಿಪಡಿಸಿದ್ದು ಸುದ್ದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>