ಕೂಡ್ಲಿಗಿ: ಮಹಿಳೆಯೊಬ್ಬರೊಂದಿಗೆ ಹೊಂದಿದ್ದ ಅನೈತಿಕ ಸಂಬಂಧ ಬಹಿರಂಗಪಡಿಸಿದರು ಎಂಬ ಶಂಕೆಯಿಂದ ತಾಲ್ಲೂಕಿನ ಗುಡೇಕೋಟೆಯ ಜ್ಞಾನ ಸಮೃದ್ಧಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ್ ಅಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸುಧಾರಾಣಿ ಅವರನ್ನು ಮಂಗಳವಾರ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.