ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾತಿ ಧರ್ಮದ ಹೆಸರಿನಲ್ಲಿ ಮತ ಕೇಳುವವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು. ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿದ ಎಲ್ಲರೂ ಸೋತಿದ್ದಾರೆ. ಅದೇ ರೀತಿ ಇಲ್ಲಿನ ಉಪಚುನಾವಣೆಯಲ್ಲೂ ಆಗಲಿದೆ. ಮತದಾರರು ಸೂಕ್ತ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.