ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಯಾವುದೇ ರೀತಿಯ ಗೊಂದಲವಿಲ್ಲ. ಅವರು ರಾಜೀನಾಮೆ ನೀಡಿ ಬಂದಿದ್ದರಿಂದ ನಮ್ಮ ಸರ್ಕಾರ ರಚನೆಯಾಗಿದೆ. ಪಾಪ, ಏನೋ ದುರಾದೃಷ್ಟ ಸೋತಿದ್ದಾರೆ. ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎನ್ನುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಅದನ್ನು ಬಳಸಿ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದರು.