ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋತವರಿಗೆ ಸಚಿವ ಸ್ಥಾನ; ಸಿ.ಎಂ ನಿರ್ಧರಿಸಲಿದ್ದಾರೆ– ಲಕ್ಷ್ಮಣ ಸವದಿ

Last Updated 25 ಜನವರಿ 2020, 11:26 IST
ಅಕ್ಷರ ಗಾತ್ರ

ಬೆಳಗಾವಿ: ‘ಉಪಚುನಾವಣೆಯಲ್ಲಿ ಸೋತ ‘ಬಂಡಾಯ ಶಾಸಕರಿಗೆ’ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ. ಬಹುಶಃ ಈ ವಾರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗಬಹುದು’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಯಾವುದೇ ರೀತಿಯ ಗೊಂದಲವಿಲ್ಲ. ಅವರು ರಾಜೀನಾಮೆ ನೀಡಿ ಬಂದಿದ್ದರಿಂದ ನಮ್ಮ ಸರ್ಕಾರ ರಚನೆಯಾಗಿದೆ. ಪಾಪ, ಏನೋ ದುರಾದೃಷ್ಟ ಸೋತಿದ್ದಾರೆ. ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎನ್ನುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಅದನ್ನು ಬಳಸಿ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದರು.

‘ಅಧಿಕಾರ ಪಡೆಯಬೇಕು, ಸಚಿವರಾಗಬೇಕು ಎಂಬ ಬಯಕೆ ಎಲ್ಲರಲ್ಲಿಯೂ ಇರುತ್ತದೆ. ಅದನ್ನು ಅವರು ಕೇಳುವುದರಲ್ಲಿ ತಪ್ಪಿಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದನ್ನು ಮುಖ್ಯಮಂತ್ರಿ ನಿರ್ಧರಿಸುತ್ತಾರೆ’ ಎಂದು ಹೇಳಿದರು.

ಅಧಿಕಾರ ತ್ಯಾಗ ಮಾಡಲು ಪಕ್ಷ ಹೇಳಿದ್ರೆ ಏನ್‌ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈಗ ಡಿಸಿಎಂ ಇದ್ದೇನೆ. ಮುಂದೆಯೂ ಇರುತ್ತೇನೆ. ಪಕ್ಷದ ಶಿಸ್ತಿನ ಕಾರ್ಯಕರ್ತನಾಗಿದ್ದು, ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ’ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT