ಆದಾಗ್ಯೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ತೆಜಸ್ವಿ ಸೂರ್ಯ ಆಯ್ಕೆ ಸಂಬಂಧ ಪಕ್ಷದಲ್ಲಿ ಅಸಮಾಧಾನವಿಲ್ಲ ಎಂದಿದ್ದಾರೆ. ‘ಆಯ್ಕೆ ಪ್ರಕ್ರಿಯೆ ಸಂಬಂಧ ಪಕ್ಷದಲ್ಲಿ ಯಾವುದೇ ಪ್ರಶ್ನಿಗಳಿಲ್ಲ. ತೇಜಸ್ವಿನಿ ಅವರೇ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ. ಪಕ್ಷದ ಅಭ್ಯರ್ಥಿಯ ಜಯಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸಮಾಡಬೇಕು’ ಎಂದು ಸೂಚಿಸಿದ್ದಾರೆ.