ಉಡುಪಿ: ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಶುಕ್ರವಾರ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ₹1.65 ಕೋಟಿ ನಗದನ್ನು ರೈಲ್ವೆ ರಕ್ಷಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ರಾಜಸ್ತಾನದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮುಂಬೈಯಿಂದ ಎರ್ನಾಕುಲಂ ಮಾರ್ಗದಲ್ಲಿ ಸಂಚರಿಸುವ ನೇತ್ರಾವತಿ ಏಕ್ಸ್ಪ್ರೆಸ್ ರೈಲಿನಲ್ಲಿಹಣ ಸಾಗಾಟ ಮಾಡಲಾಗುತ್ತಿತ್ತು. ಈ ಹಣವನ್ನು ಪಡೆಯಲು ಇಂದ್ರಾಳಿ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಕಾಯುತ್ತ ಕುಳಿತ್ತಿದ್ದ. ಈ ಬಗ್ಗೆ ಸಂಶಯಗೊಂಡ ರೈಲ್ವೆ ರಕ್ಷಣಾ ಸಿಬ್ಬಂದಿ ವಿಚಾರಣೆ ಮಾಡಿದಾಗ ಅಕ್ರಮ ಪತ್ತೆಯಾಗಿದೆ.
ಐಟಿ ಅಧಿಕಾರಿಗಳು, ಉಡುಪಿ ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿದ್ದಾರೆ. ರೈಲ್ವೆ ರಕ್ಷಾಣಾ ದಳ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ.