ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಕಾರಣ ಹೂವಿನಹಡಗಲಿಯಲ್ಲಿ 120ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಐದು ಸಾವಿರ ಹೆಕ್ಟೇರ್ ಗೂ ಅಧಿಕ ಪ್ರದೇಶಕ್ಕೆ ನೀರು ನುಗ್ಗಿರುವುದರಿಂದ ಬೆಳೆ ಹಾನಿಯಾಗಿದೆ. ಸಂಸದ ವೈ.ದೇವೇಂದ್ರಪ್ಪ, ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಅವರು ಅಧಿಕಾರಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.