<p><strong>ಟೋಕಿಯೊ:</strong> ದಕ್ಷಿಣ ಜಪಾನ್ನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಭೀತಿ ಎದುರಾಗಿದ್ದು, ಮಣ್ಣು ಕುಸಿತ ಸಂಭವಿಸಿದೆ. ಇದರಿಂದಾಗಿ ಈವರೆಗೆ 34 ಮಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.</p>.<p>ಕುಮಮೊಟೊ ಪ್ರಾಂತ್ಯದಲ್ಲಿ ಸಿಲುಕಿರುವ ಜನರನ್ನುಹೆಲಿಕಾಪ್ಟರ್ ಮತ್ತು ದೋಣಿಗಳ ಮೂಲಕ ರಕ್ಷಿಸಲಾಗಿದೆ. 40,000ಕ್ಕೂ ಹೆಚ್ಚು ರಕ್ಷಣಾ ಪಡೆ,ಕರಾವಳಿ ಕಾವಲು ಪಡೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. </p>.<p>ಕುಮಾ ನದಿ ಪ್ರದೇಶವು ಸಂಪೂರ್ಣವಾಗಿ ಜಲಾವೃತವಾಗಿದ್ದು ಅಲ್ಲಿನ ಮನೆಗಳು, ಗಾಡಿಗಳು ಭಾಗಶಃ ಮುಳುಗಡೆಯಾಗಿವೆ. ಪ್ರವಾಹದಲ್ಲಿ ಕುಮಾ ಗ್ರಾಮದ 14 ನಿವಾಸಿಗಳು ಮೃತಪಟ್ಟಿರ ಬಹುದು ಎಂದು ಶಂಕಿಸಲಾಗಿದೆ.</p>.<p>ಭಾನುವಾರ ಸಂಜೆ ತನಕ ಗ್ರಾಮದ 51 ನಿವಾಸಿಗಳನ್ನು ದೋಣಿಗಳ ಮೂಲಕ ರಕ್ಷಿಸಿ ಚಿಕಿತ್ಸೆ ನೀಡಲಾಗಿದೆ. ಉಳಿದ 30 ಮಂದಿಸ್ಥಳೀಯ ಆರೈಕೆ ಕೇಂದ್ರದಲ್ಲಿ ಸಿಲುಕಿದ್ದರು.ಸ್ಥಳೀಯ ರಿವರ್ ರ್ಯಾಫ್ಟಿಂಗ್ ತಂಡಶಿಗೆಮಿಟ್ಸು ಸಕೋಡಾನ ಸಹಾಯದೊಂದಿಗೆ ಆರೈಕೆ ಕೇಂದ್ರದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೋಕಿಯೊ:</strong> ದಕ್ಷಿಣ ಜಪಾನ್ನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಭೀತಿ ಎದುರಾಗಿದ್ದು, ಮಣ್ಣು ಕುಸಿತ ಸಂಭವಿಸಿದೆ. ಇದರಿಂದಾಗಿ ಈವರೆಗೆ 34 ಮಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.</p>.<p>ಕುಮಮೊಟೊ ಪ್ರಾಂತ್ಯದಲ್ಲಿ ಸಿಲುಕಿರುವ ಜನರನ್ನುಹೆಲಿಕಾಪ್ಟರ್ ಮತ್ತು ದೋಣಿಗಳ ಮೂಲಕ ರಕ್ಷಿಸಲಾಗಿದೆ. 40,000ಕ್ಕೂ ಹೆಚ್ಚು ರಕ್ಷಣಾ ಪಡೆ,ಕರಾವಳಿ ಕಾವಲು ಪಡೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. </p>.<p>ಕುಮಾ ನದಿ ಪ್ರದೇಶವು ಸಂಪೂರ್ಣವಾಗಿ ಜಲಾವೃತವಾಗಿದ್ದು ಅಲ್ಲಿನ ಮನೆಗಳು, ಗಾಡಿಗಳು ಭಾಗಶಃ ಮುಳುಗಡೆಯಾಗಿವೆ. ಪ್ರವಾಹದಲ್ಲಿ ಕುಮಾ ಗ್ರಾಮದ 14 ನಿವಾಸಿಗಳು ಮೃತಪಟ್ಟಿರ ಬಹುದು ಎಂದು ಶಂಕಿಸಲಾಗಿದೆ.</p>.<p>ಭಾನುವಾರ ಸಂಜೆ ತನಕ ಗ್ರಾಮದ 51 ನಿವಾಸಿಗಳನ್ನು ದೋಣಿಗಳ ಮೂಲಕ ರಕ್ಷಿಸಿ ಚಿಕಿತ್ಸೆ ನೀಡಲಾಗಿದೆ. ಉಳಿದ 30 ಮಂದಿಸ್ಥಳೀಯ ಆರೈಕೆ ಕೇಂದ್ರದಲ್ಲಿ ಸಿಲುಕಿದ್ದರು.ಸ್ಥಳೀಯ ರಿವರ್ ರ್ಯಾಫ್ಟಿಂಗ್ ತಂಡಶಿಗೆಮಿಟ್ಸು ಸಕೋಡಾನ ಸಹಾಯದೊಂದಿಗೆ ಆರೈಕೆ ಕೇಂದ್ರದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>