ನೆರೆ ರಾಷ್ಟ್ರಗಳು ಮಾತ್ರವಲ್ಲ, ದಕ್ಷಿಣ ಚೀನಾ ಸಮುದ್ರ, ಸೆಂಕಾಕು ದ್ವೀಪದ ಮೇಲೆ ಒಡೆತನ ಸ್ಥಾಪಿಸಲು ಮುಂದಾಗುತ್ತಿರುವ ಚೀನಾದ ಕ್ರಮದ ವಿರುದ್ಧವೂ ಆತಂಕ ವ್ಯಕ್ತಪಡಿಸಲಾಗಿದೆ. ಕೊರೊನಾ ವೈರಸ್ನಿಂದ ಭಾರತವು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭವನ್ನು ಬಳಸಿಕೊಂಡು, ಭಾರತದ ಭೂಪ್ರದೇಶವನ್ನು ಕಬಳಿಸುವ ಪ್ರಯತ್ನ ಚೀನಾ ನಡೆಸಿದೆ ಎಂದು ಹೇಳಲಾಗಿದೆ.