<p class="bodytext"><strong>ಕಠ್ಮಂಡು: </strong>ನೇಪಾಳ ಕಮ್ಯುನಿಸ್ಟ್ ಪಕ್ಷದ ಅತ್ಯಂತ ಮಹತ್ವದ್ದು ಎನ್ನಲಾಗಿದ್ದ ಸಭೆಯನ್ನು ಬುಧವಾರ ಮತ್ತೊಮ್ಮೆ ಮುಂದೂಡಲಾಗಿದೆ. ಈ ಹಿಂದೆಯೂ ಮೂರು ಬಾರಿ ಸಭೆಯನ್ನು ಮುಂದೂಡಲಾಗಿತ್ತು. ಸಭೆಯಲ್ಲಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎನ್ನಲಾಗಿತ್ತು.</p>.<p class="bodytext">ಒಲಿ ಅವರು ಇತ್ತೀಚೆಗೆ ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದ ನಂತರ, ಅವರ ವಿರುದ್ಧ ಪಕ್ಷದೊಳಗೆ ಬಂಡಾಯ ಸೃಷ್ಟಿಯಾಗಿ, ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಹೆಚ್ಚಿದೆ. ಈ ಕುರಿತ ತೀರ್ಮಾನಗಳನ್ನು ಕೈಗೊಳ್ಳುವ ಸಲುವಾಗಿ ಕಮ್ಯುನಿಸ್ಟ್ ಪಕ್ಷದ 45 ಸದಸ್ಯರನ್ನೊಳಗೊಂಡ ಉನ್ನತಮಟ್ಟದ ಸ್ಥಾಯಿ ಸಮಿತಿಯ ಸಭೆಯನ್ನು ಬುಧವಾರ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ‘ಸಭೆಯನ್ನು ಶುಕ್ರವಾರದವರೆಗೆ ಮುಂದೂಡಲಾಗಿದೆ’ ಎಂದು ಪ್ರಧಾನಿ ಒಲಿ ಅವರ ಮಾಧ್ಯಮ ಸಲಹೆಗಾರ ಸೂರ್ಯ ಥಾಪ ತಿಳಿಸಿದ್ದಾರೆ.</p>.<p>‘ಒಲಿ ಅವರು ಭಾರತವನ್ನು ಕುರಿತು ನೀಡಿದ ಈಚಿನ ಹೇಳಿಕೆಗಳು ರಾಜಕೀಯವಾಗಿ ಸರಿಯಾದವುಗಳಲ್ಲ ಅಷ್ಟೇ ಅಲ್ಲ ರಾಜತಾಂತ್ರಿಕವಾಗಿ ಸೂಕ್ತವೆನ್ನಿಸುವಂಥವುಗಳೂ ಅಲ್ಲ’ ಎಂದು ಆಕ್ಷೇಪಿಸಿದ್ದ ಅವರದ್ದೇ ಪಕ್ಷದ ನಾಯಕ, ಮಾಜಿ ಪ್ರಧಾನಿ ಪುಷ್ಪಕಮಲ್ ದಹಲ್ ‘ಪ್ರಚಂಡ’ ಅವರು, ಒಲಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು.</p>.<p>ನೇಪಾಳದ ಕಮ್ಯುನಿಸ್ಟ್ ಪಕ್ಷವು ಎರಡು ಬಣಗಳಾಗಿ ಒಡೆದಿದ್ದು, ಒಂದರ ನೇತೃತ್ವವನ್ನು ಒಲಿ ವಹಿಸಿದ್ದರೆ ಇನ್ನೊಂದು ಬಣದ ನಾಯಕತ್ವವನ್ನು ಪ್ರಚಂಡ ಅವರು ವಹಿಸಿದ್ದಾರೆ. ಕೆಲವು ದಿನಗಳ ಹಿಂದೆ ಈ ಎರಡೂ ಬಣಗಳು ಅಧಿಕಾರ ಹಂಚಿಕೆಯ ಬಗ್ಗೆ ಒಂದು ಒಪ್ಪಂದಕ್ಕೆ ಬಂದಿದ್ದವು. ಆದರೆ ಪ್ರಧಾನಿ ಒಲಿ ಅವರು ಏಕಪಕ್ಷೀಯವಾಗಿ ಬಜೆಟ್ ಅಧಿವೇಶನವನ್ನು ಘೋಷಿಸಿದ ನಂತರ ಎರಡು ಬಣಗಳ ಮಧ್ಯೆ ಮತ್ತೆ ಭಿನ್ನಮತ ಸೃಷ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಕಠ್ಮಂಡು: </strong>ನೇಪಾಳ ಕಮ್ಯುನಿಸ್ಟ್ ಪಕ್ಷದ ಅತ್ಯಂತ ಮಹತ್ವದ್ದು ಎನ್ನಲಾಗಿದ್ದ ಸಭೆಯನ್ನು ಬುಧವಾರ ಮತ್ತೊಮ್ಮೆ ಮುಂದೂಡಲಾಗಿದೆ. ಈ ಹಿಂದೆಯೂ ಮೂರು ಬಾರಿ ಸಭೆಯನ್ನು ಮುಂದೂಡಲಾಗಿತ್ತು. ಸಭೆಯಲ್ಲಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎನ್ನಲಾಗಿತ್ತು.</p>.<p class="bodytext">ಒಲಿ ಅವರು ಇತ್ತೀಚೆಗೆ ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದ ನಂತರ, ಅವರ ವಿರುದ್ಧ ಪಕ್ಷದೊಳಗೆ ಬಂಡಾಯ ಸೃಷ್ಟಿಯಾಗಿ, ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಹೆಚ್ಚಿದೆ. ಈ ಕುರಿತ ತೀರ್ಮಾನಗಳನ್ನು ಕೈಗೊಳ್ಳುವ ಸಲುವಾಗಿ ಕಮ್ಯುನಿಸ್ಟ್ ಪಕ್ಷದ 45 ಸದಸ್ಯರನ್ನೊಳಗೊಂಡ ಉನ್ನತಮಟ್ಟದ ಸ್ಥಾಯಿ ಸಮಿತಿಯ ಸಭೆಯನ್ನು ಬುಧವಾರ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ‘ಸಭೆಯನ್ನು ಶುಕ್ರವಾರದವರೆಗೆ ಮುಂದೂಡಲಾಗಿದೆ’ ಎಂದು ಪ್ರಧಾನಿ ಒಲಿ ಅವರ ಮಾಧ್ಯಮ ಸಲಹೆಗಾರ ಸೂರ್ಯ ಥಾಪ ತಿಳಿಸಿದ್ದಾರೆ.</p>.<p>‘ಒಲಿ ಅವರು ಭಾರತವನ್ನು ಕುರಿತು ನೀಡಿದ ಈಚಿನ ಹೇಳಿಕೆಗಳು ರಾಜಕೀಯವಾಗಿ ಸರಿಯಾದವುಗಳಲ್ಲ ಅಷ್ಟೇ ಅಲ್ಲ ರಾಜತಾಂತ್ರಿಕವಾಗಿ ಸೂಕ್ತವೆನ್ನಿಸುವಂಥವುಗಳೂ ಅಲ್ಲ’ ಎಂದು ಆಕ್ಷೇಪಿಸಿದ್ದ ಅವರದ್ದೇ ಪಕ್ಷದ ನಾಯಕ, ಮಾಜಿ ಪ್ರಧಾನಿ ಪುಷ್ಪಕಮಲ್ ದಹಲ್ ‘ಪ್ರಚಂಡ’ ಅವರು, ಒಲಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು.</p>.<p>ನೇಪಾಳದ ಕಮ್ಯುನಿಸ್ಟ್ ಪಕ್ಷವು ಎರಡು ಬಣಗಳಾಗಿ ಒಡೆದಿದ್ದು, ಒಂದರ ನೇತೃತ್ವವನ್ನು ಒಲಿ ವಹಿಸಿದ್ದರೆ ಇನ್ನೊಂದು ಬಣದ ನಾಯಕತ್ವವನ್ನು ಪ್ರಚಂಡ ಅವರು ವಹಿಸಿದ್ದಾರೆ. ಕೆಲವು ದಿನಗಳ ಹಿಂದೆ ಈ ಎರಡೂ ಬಣಗಳು ಅಧಿಕಾರ ಹಂಚಿಕೆಯ ಬಗ್ಗೆ ಒಂದು ಒಪ್ಪಂದಕ್ಕೆ ಬಂದಿದ್ದವು. ಆದರೆ ಪ್ರಧಾನಿ ಒಲಿ ಅವರು ಏಕಪಕ್ಷೀಯವಾಗಿ ಬಜೆಟ್ ಅಧಿವೇಶನವನ್ನು ಘೋಷಿಸಿದ ನಂತರ ಎರಡು ಬಣಗಳ ಮಧ್ಯೆ ಮತ್ತೆ ಭಿನ್ನಮತ ಸೃಷ್ಟಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>