ಒಲಿ ಅವರು ಇತ್ತೀಚೆಗೆ ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದ ನಂತರ, ಅವರ ವಿರುದ್ಧ ಪಕ್ಷದೊಳಗೆ ಬಂಡಾಯ ಸೃಷ್ಟಿಯಾಗಿ, ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಹೆಚ್ಚಿದೆ. ಈ ಕುರಿತ ತೀರ್ಮಾನಗಳನ್ನು ಕೈಗೊಳ್ಳುವ ಸಲುವಾಗಿ ಕಮ್ಯುನಿಸ್ಟ್ ಪಕ್ಷದ 45 ಸದಸ್ಯರನ್ನೊಳಗೊಂಡ ಉನ್ನತಮಟ್ಟದ ಸ್ಥಾಯಿ ಸಮಿತಿಯ ಸಭೆಯನ್ನು ಬುಧವಾರ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ‘ಸಭೆಯನ್ನು ಶುಕ್ರವಾರದವರೆಗೆ ಮುಂದೂಡಲಾಗಿದೆ’ ಎಂದು ಪ್ರಧಾನಿ ಒಲಿ ಅವರ ಮಾಧ್ಯಮ ಸಲಹೆಗಾರ ಸೂರ್ಯ ಥಾಪ ತಿಳಿಸಿದ್ದಾರೆ.