<p><strong>ಕಠ್ಮಂಡು: </strong>ನೇಪಾಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ನಿರ್ಣಾಯಕ ಸಭೆಯನ್ನು ಐದನೇ ಬಾರಿ ಮುಂದೂಡಲಾಗಿದೆ. ಪ್ರಧಾನಿ ಕೆ.ಪಿ.ಶರ್ಮಾ ಒಲಿ ಮತ್ತು ಮಾಜಿ ಪ್ರಧಾನಿ ಪುಷ್ಪಕಮಲ್ ದಹಲ್ ‘ಪ್ರಚಂಡ’ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಕಾಲಾವಕಾಶ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಶುಕ್ರವಾರ ನಡೆಯಬೇಕಿದ್ದ ನಿರ್ಣಾಯಕ ಸಭೆಯನ್ನು ಒಲಿ ಮತ್ತು ದಹಲ್ ಅವರ ಮನವಿ ಮೇರೆಗೆ ಭಾನುವಾರಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಒಲಿ ಅವರ ಮಾಧ್ಯಮ ಸಲಹೆಗಾರ ಸೂರ್ಯ ಥಾಪ ಅವರು ಟ್ವೀಟ್ ಮಾಡಿದ್ದಾರೆ. ಸ್ಥಾಯಿ ಸಮಿತಿಯ ಸಭೆ ಈ ಹಿಂದೆ ಜುಲೈ 2ರಂದು ನಡೆದಿತ್ತು. ಆದರೆ ನಾಯಕರಿಬ್ಬರ ನಡುವೆ ಭಿನ್ನಭಿಪ್ರಾಯ ಬಗೆಹರಿಯದ ಕಾರಣ ಈ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಾಯಿ ಸಮಿತಿಯ ಸದಸ್ಯ ಗಣೇಶ್ ಶಾ, ಭಾನುವಾರ ನಡೆಯಲಿರುವ ಸಭೆ ಬಹಳ ಮಹತ್ವಪೂರ್ಣವಾಗಿದೆ. ಈ ಸಭೆಯಲ್ಲಿ ಕೆ.ಪಿ ಶರ್ಮಾ ಒಲಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದಿದ್ದಾರೆ.</p>.<p>ನೇಪಾಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ನೇತೃತ್ವದ ಬಣವು ಒಲಿ ವಿರುದ್ಧ ಬಂಡಾಯ ಸಾರಿದ್ದು, ಅಧಿಕಾರ ಹಂಚಿಕೆ ಕುರಿತು ನಾಯಕರಿಬ್ಬರ ನಡುವೆ ಭಿನ್ನಭಿಪ್ರಾಯಗಳು ಉಂಟಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು: </strong>ನೇಪಾಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ನಿರ್ಣಾಯಕ ಸಭೆಯನ್ನು ಐದನೇ ಬಾರಿ ಮುಂದೂಡಲಾಗಿದೆ. ಪ್ರಧಾನಿ ಕೆ.ಪಿ.ಶರ್ಮಾ ಒಲಿ ಮತ್ತು ಮಾಜಿ ಪ್ರಧಾನಿ ಪುಷ್ಪಕಮಲ್ ದಹಲ್ ‘ಪ್ರಚಂಡ’ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಕಾಲಾವಕಾಶ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಶುಕ್ರವಾರ ನಡೆಯಬೇಕಿದ್ದ ನಿರ್ಣಾಯಕ ಸಭೆಯನ್ನು ಒಲಿ ಮತ್ತು ದಹಲ್ ಅವರ ಮನವಿ ಮೇರೆಗೆ ಭಾನುವಾರಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಒಲಿ ಅವರ ಮಾಧ್ಯಮ ಸಲಹೆಗಾರ ಸೂರ್ಯ ಥಾಪ ಅವರು ಟ್ವೀಟ್ ಮಾಡಿದ್ದಾರೆ. ಸ್ಥಾಯಿ ಸಮಿತಿಯ ಸಭೆ ಈ ಹಿಂದೆ ಜುಲೈ 2ರಂದು ನಡೆದಿತ್ತು. ಆದರೆ ನಾಯಕರಿಬ್ಬರ ನಡುವೆ ಭಿನ್ನಭಿಪ್ರಾಯ ಬಗೆಹರಿಯದ ಕಾರಣ ಈ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಾಯಿ ಸಮಿತಿಯ ಸದಸ್ಯ ಗಣೇಶ್ ಶಾ, ಭಾನುವಾರ ನಡೆಯಲಿರುವ ಸಭೆ ಬಹಳ ಮಹತ್ವಪೂರ್ಣವಾಗಿದೆ. ಈ ಸಭೆಯಲ್ಲಿ ಕೆ.ಪಿ ಶರ್ಮಾ ಒಲಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದಿದ್ದಾರೆ.</p>.<p>ನೇಪಾಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ನೇತೃತ್ವದ ಬಣವು ಒಲಿ ವಿರುದ್ಧ ಬಂಡಾಯ ಸಾರಿದ್ದು, ಅಧಿಕಾರ ಹಂಚಿಕೆ ಕುರಿತು ನಾಯಕರಿಬ್ಬರ ನಡುವೆ ಭಿನ್ನಭಿಪ್ರಾಯಗಳು ಉಂಟಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>