<p><strong>ಕಠ್ಮಂಡು:</strong> ಶುಕ್ರವಾರ ನಡೆಸಲು ಉದ್ದೇಶಿಸಿದ್ದ ನೇಪಾಳ ಕಮ್ಯುನಿಸ್ಟ್ ಪಕ್ಷದ (ಎನ್ಸಿಪಿ) ಸಭೆಯನ್ನು ಪುನಃ ಮುಂದೂಡಲಾಗಿದೆ. ಪಕ್ಷದ ಸಭೆಯಲ್ಲಿ ಪ್ರಧಾನಿ ಕೆ.ಪಿ. ಒಲಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂಬ ಕಾರಣಕ್ಕೆ ಈ ಸಭೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ.</p>.<p>ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದ ನಂತರ ಒಲಿ ಅವರ ರಾಜೀನಾಮೆಗೆ ಪಕ್ಷದೊಳಗಿನಿಂದಲೇ ಒತ್ತಡ ಹೆಚ್ಚಾಗಿದೆ. ಆ ಕಾರಣಕ್ಕೆ ಒಲಿ ಅವರು ಪ್ರತಿಬಾರಿಯೂ ಸಭೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಇದಕ್ಕೂ ಹಿಂದೆ ಸಭೆ ನಾಲ್ಕು ಬಾರಿ ಮುಂದೂಡಿಕೆಯಾಗಿದೆ. ದೇಶದಲ್ಲಿ ಉಂಟಾಗಿರುವ ಪ್ರವಾಹ ಸ್ಥಿತಿಯ ಕಾರಣ ನೀಡಿ ಈಗ ಐದನೇ ಬಾರಿಗೆ ಸಭೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಲಾಗಿದೆ.</p>.<p>‘ದೇಶದಲ್ಲಿ ಪ್ರವಾಹ, ಭೂಕುಸಿತಗಳು ಸಂಭವಿಸಿದ್ದು, ಪಕ್ಷವು ಪರಿಹಾರ ಕಾರ್ಯಗಳಲ್ಲಿ ನಿರತವಾಗಿದೆ. ಆ ಕಾರಣಕ್ಕೆ ಸಭೆಯನ್ನು ಮುಂದೂಡಲಾಗಿದೆ’ ಎಂದು ನೇಪಾಳ ಕಮ್ಯುನಿಸ್ಟ್ ಪಕ್ಷದ ವಕ್ತಾರ ನಾರಾಯಣ ಕಾಜಿ ಶ್ರೇಷ್ಠ ಅವರು ತಿಳಿಸಿರುವುದಾಗಿ ‘ರಿಪಬ್ಲಿಕಾ ಪತ್ರಿಕೆ’ ವರದಿ ಮಾಡಿದೆ.</p>.<p>ನೇಪಾಳದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು ಒಂದು ಮಗುವೂ ಸೇರಿ ಇಬ್ಬರು ಗುರುವಾರ ಮೃತಪಟ್ಟಿದ್ದಾರೆ. ಹಲವು ಮನೆಗಳು ಕೊಚ್ಚಿಹೋಗಿದ್ದು, 18 ಮಂದಿ ನಾಪತ್ತೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ಶುಕ್ರವಾರ ನಡೆಸಲು ಉದ್ದೇಶಿಸಿದ್ದ ನೇಪಾಳ ಕಮ್ಯುನಿಸ್ಟ್ ಪಕ್ಷದ (ಎನ್ಸಿಪಿ) ಸಭೆಯನ್ನು ಪುನಃ ಮುಂದೂಡಲಾಗಿದೆ. ಪಕ್ಷದ ಸಭೆಯಲ್ಲಿ ಪ್ರಧಾನಿ ಕೆ.ಪಿ. ಒಲಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂಬ ಕಾರಣಕ್ಕೆ ಈ ಸಭೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ.</p>.<p>ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದ ನಂತರ ಒಲಿ ಅವರ ರಾಜೀನಾಮೆಗೆ ಪಕ್ಷದೊಳಗಿನಿಂದಲೇ ಒತ್ತಡ ಹೆಚ್ಚಾಗಿದೆ. ಆ ಕಾರಣಕ್ಕೆ ಒಲಿ ಅವರು ಪ್ರತಿಬಾರಿಯೂ ಸಭೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಇದಕ್ಕೂ ಹಿಂದೆ ಸಭೆ ನಾಲ್ಕು ಬಾರಿ ಮುಂದೂಡಿಕೆಯಾಗಿದೆ. ದೇಶದಲ್ಲಿ ಉಂಟಾಗಿರುವ ಪ್ರವಾಹ ಸ್ಥಿತಿಯ ಕಾರಣ ನೀಡಿ ಈಗ ಐದನೇ ಬಾರಿಗೆ ಸಭೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಲಾಗಿದೆ.</p>.<p>‘ದೇಶದಲ್ಲಿ ಪ್ರವಾಹ, ಭೂಕುಸಿತಗಳು ಸಂಭವಿಸಿದ್ದು, ಪಕ್ಷವು ಪರಿಹಾರ ಕಾರ್ಯಗಳಲ್ಲಿ ನಿರತವಾಗಿದೆ. ಆ ಕಾರಣಕ್ಕೆ ಸಭೆಯನ್ನು ಮುಂದೂಡಲಾಗಿದೆ’ ಎಂದು ನೇಪಾಳ ಕಮ್ಯುನಿಸ್ಟ್ ಪಕ್ಷದ ವಕ್ತಾರ ನಾರಾಯಣ ಕಾಜಿ ಶ್ರೇಷ್ಠ ಅವರು ತಿಳಿಸಿರುವುದಾಗಿ ‘ರಿಪಬ್ಲಿಕಾ ಪತ್ರಿಕೆ’ ವರದಿ ಮಾಡಿದೆ.</p>.<p>ನೇಪಾಳದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು ಒಂದು ಮಗುವೂ ಸೇರಿ ಇಬ್ಬರು ಗುರುವಾರ ಮೃತಪಟ್ಟಿದ್ದಾರೆ. ಹಲವು ಮನೆಗಳು ಕೊಚ್ಚಿಹೋಗಿದ್ದು, 18 ಮಂದಿ ನಾಪತ್ತೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>