ಭಾರತದ ಪ್ರಧಾನಿ ನರೇಂದ್ರ ಮೋದಿ ಲಡಾಖ್ ಭೇಟಿ ಸಮಯದಲ್ಲಿ ಚೀನಾ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಜೋ ಲಿಜಿಯಾನ್ ಈ ಹೇಳಿಕೆ ನೀಡಿದ್ದು, ಭಾರತಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದಂತಾಗಿದೆ. ಭಾರತ ಹಾಗೂ ಚೀನಾ ಗಡಿಯ ಕುರಿತು ಎರಡೂ ರಾಷ್ಟ್ರಗಳ ಸೇನೆ ನಡುವೆ ಹೊಡೆದಾಟ, ಹಲ್ಲೆಯಂತಹ ಕೃತ್ಯಗಳು ನಡೆಯುತ್ತಿವೆ. ಇದೇ ಕಾರಣಕ್ಕಾಗಿ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ.