<p><strong>ಕಠ್ಮಂಡು</strong>: ನೇಪಾಳದ ಪಶ್ಚಿಮ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ಕನಿಷ್ಠ 12 ಮಂದಿ ಸಾವಿಗೀಡಾಗಿದ್ದು, 19 ಮಂದಿ ನಾಪತ್ತೆಯಾಗಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.</p>.<p>ಕಸ್ಕಿ ಜಿಲ್ಲೆಯ ಪೋಖರಾ ನಗರದ ಸಾರಂಗ್ಕೋಟ್ ಮತ್ತು ಹೆಮ್ಜನ್ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ.</p>.<p>ಗುರುವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಭೂಕುಸಿತ ಘಟನೆಗಳಲ್ಲಿ ಲ್ಯಾಮ್ಜಂಗ್ ಜಿಲ್ಲೆಯ ಬೇಸಿಶಹರ್ನಲ್ಲಿನ ಕುಟುಂಬವೊಂದರ ಮೂವರು ಸದಸ್ಯರು ಹಾಗೂ ರುಕುಂ ಜಿಲ್ಲೆಯ ಆಥ್ಬಿಸ್ಕೊಟ್ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.</p>.<p>ಈ ನಡುವೆ ಜರ್ಜೊರ್ಕೋಟ್ ಜಿಲ್ಲೆಯಲ್ಲಿ ಭೂಕುಸಿತದಿಂದ ಎರಡು ಮನೆಗಳು ಹಾನಿಗೀಡಾಗಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಮ್ಯಾಗ್ಡಿ ಜಿಲ್ಲೆಯಲ್ಲೂ ಭೂಕುಸಿತದಿಂದ 7 ಮಂದಿ ನಾಪತ್ತೆಯಾಗಿದ್ದಾರೆ.</p>.<p>ಜೋಗಿಮರ ಪ್ರದೇಶದಲ್ಲಿ ಭೂಕುಸಿತದಿಂದಾಗಿ ಪಶ್ಚಿಮ ನೇಪಾಳದ ಪೃಥ್ವಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ನಿರಂತರ ಮಳೆಯಾಗುತ್ತಿರುವ ಕಾರಣ, ನಾರಾಯಣಿ ಸೇರಿದಂತೆ ಇತರ ಪ್ರಮುಖನದಿಗಳು ಉಕ್ಕಿ ಹರಿಯುತ್ತಿವೆ.</p>.<p>ನೇಪಾಳದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ನೇಪಾಳದ ಪಶ್ಚಿಮ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ಕನಿಷ್ಠ 12 ಮಂದಿ ಸಾವಿಗೀಡಾಗಿದ್ದು, 19 ಮಂದಿ ನಾಪತ್ತೆಯಾಗಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.</p>.<p>ಕಸ್ಕಿ ಜಿಲ್ಲೆಯ ಪೋಖರಾ ನಗರದ ಸಾರಂಗ್ಕೋಟ್ ಮತ್ತು ಹೆಮ್ಜನ್ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ.</p>.<p>ಗುರುವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಭೂಕುಸಿತ ಘಟನೆಗಳಲ್ಲಿ ಲ್ಯಾಮ್ಜಂಗ್ ಜಿಲ್ಲೆಯ ಬೇಸಿಶಹರ್ನಲ್ಲಿನ ಕುಟುಂಬವೊಂದರ ಮೂವರು ಸದಸ್ಯರು ಹಾಗೂ ರುಕುಂ ಜಿಲ್ಲೆಯ ಆಥ್ಬಿಸ್ಕೊಟ್ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.</p>.<p>ಈ ನಡುವೆ ಜರ್ಜೊರ್ಕೋಟ್ ಜಿಲ್ಲೆಯಲ್ಲಿ ಭೂಕುಸಿತದಿಂದ ಎರಡು ಮನೆಗಳು ಹಾನಿಗೀಡಾಗಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಮ್ಯಾಗ್ಡಿ ಜಿಲ್ಲೆಯಲ್ಲೂ ಭೂಕುಸಿತದಿಂದ 7 ಮಂದಿ ನಾಪತ್ತೆಯಾಗಿದ್ದಾರೆ.</p>.<p>ಜೋಗಿಮರ ಪ್ರದೇಶದಲ್ಲಿ ಭೂಕುಸಿತದಿಂದಾಗಿ ಪಶ್ಚಿಮ ನೇಪಾಳದ ಪೃಥ್ವಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ನಿರಂತರ ಮಳೆಯಾಗುತ್ತಿರುವ ಕಾರಣ, ನಾರಾಯಣಿ ಸೇರಿದಂತೆ ಇತರ ಪ್ರಮುಖನದಿಗಳು ಉಕ್ಕಿ ಹರಿಯುತ್ತಿವೆ.</p>.<p>ನೇಪಾಳದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>