ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ: ಕಾಂಗ್ರೆಸ್ಗೆ ಬಿಜೆಪಿ ಪ್ರಶ್ನೆ
ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ ಎಂದು ಬಿಜೆಪಿ ಕಾಂಗ್ರೆಸ್ ಅನ್ನು ಪ್ರಶ್ನೆ ಮಾಡಿದೆ. ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, 'ಸಂಪತ್ ರಾಜ್ ಬಂಧನವಾದ ನಂತರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಮ್ಮ ಪರವಾಗಿ ನಿಲ್ಲುವಂತೆ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಏನಾಗುತ್ತಿದೆ ಕಾಂಗ್ರೆಸ್? ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ?' ಎಂದು ಅದು ಪ್ರಶ್ನಿಸಿದೆ.Last Updated 17 ನವೆಂಬರ್ 2020, 5:51 IST