ದರ್ಶನ್ ಅಭಿನಯದ ‘ಗಂಡುಗಲಿ ಮದಕರಿನಾಯಕ’ ಚಿತ್ರಕ್ಕೆ ಡಿ. 2ರಂದು ಮುಹೂರ್ತ
‘ನಾನು ಕ್ಯೂ ಜಂಪ್ ಮಾಡುವುದು ಎರಡೇ ಸಲ. ಒಂದು ಐತಿಹಾಸಿಕ ಸಿನಿಮಾಗೆ; ಇನ್ನೊಂದು ಪೌರಾಣಿಕ ಚಿತ್ರಕ್ಕೆ’ –‘ಮುನಿರತ್ನ ಕುರುಕ್ಷೇತ್ರ’ ಸಿನಿಮಾದ ಬಿಡುಗಡೆ ವೇಳೆ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಹೇಳಿದ್ದ ಮಾತು ಇದು. ಐತಿಹಾಸಿಕ ಮತ್ತು ಪೌರಾಣಿಕ ಸಿನಿಮಾ ನಿರ್ಮಿಸಲು ಮುಂದೆ ಬರುವ ನಿರ್ಮಾಪಕರಿಗೆ ನನ್ನ ಮೊದಲ ಆದ್ಯತೆ. ವ್ಯಾಪಾರಿ ಸಿನಿಮಾಗಳನ್ನು ಬದಿಗೆ ಸರಿಸಿ ಈ ಮಾದರಿಯ ಸಿನಿಮಾಗಳಿಗೆ ವಿಶೇಷ ಒತ್ತು ನೀಡುತ್ತೇನೆ ಎಂದಿದ್ದರು.Last Updated 18 ನವೆಂಬರ್ 2019, 9:04 IST