ರಂಗಸ್ಥಳದಲ್ಲೇ ಕಲಾಯಾತ್ರೆ ಮುಗಿಸಿದ ಹುಡಗೋಡು
ಭೀಷ್ಮ ವಿಜಯದಲ್ಲಿ ‘ಸಾಲ್ವ’ನ ಪಾತ್ರವದು. ‘ಧುರ ಪರಾಕ್ರಮ ಭೀಷ್ಮಂಗೆ ಮಾರಿಹೋದುದೆ’ ಎಂದು ಅಬ್ಬರದ ಕುಣಿತ ಆರಂಭಿಸಿದ ಕಲಾವಿದ ರಂಗಸ್ಥಳದಲ್ಲೇ ಕುಸಿದರು. ‘ಸಾಲ್ವ’ನಾಗಿ ಪಾತ್ರಕ್ಕೆ ಜೀವ ತುಂಬಿದವರು ಹುಡಗೋಡು ಚಂದ್ರಹಾಸ ನಾಯ್ಕ್ (52). ಬಣ್ಣದ ವೇಷ ತೊಟ್ಟು ಯಕ್ಷಗಾನ ಕಲೋಪಾಸನೆ ಮಾಡುತ್ತಲೇ ಅವರು ಇಹಲೋಕದ ಯಾತ್ರೆ ಮುಗಿಸಿದರು.Last Updated 11 ಮಾರ್ಚ್ 2019, 19:38 IST