ತಲೆಮರೆಸಿಕೊಂಡ ಪಶ್ಚಿಮ ಬಂಗಾಳದ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್
ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೊಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರು ಸಿಬಿಐ ತನಿಖೆಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.
ಶನಿವಾರ ಅವರ ಮನೆಗೆ ತೆರಳಿದ್ದ ಸಿಬಿಐ ತಂಡಕ್ಕೆ ಸಿಗಲಿಲ್ಲ. ಅಲ್ಲದೆ, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ತನಗೆ ಬಂಧನದಿಂದ ವಿನಾಯಿತಿ ನೀಡಬೇಕೆಂದು ಕೋರಿ ಕೋಲ್ಕತಾ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯ ರಾಜೀವ್ ಕುಮಾರ್ ಅವರ ಅರ್ಜಿಯನ್ನು ತಳ್ಳಿಹಾಕಿತು.Last Updated 14 ಸೆಪ್ಟೆಂಬರ್ 2019, 13:14 IST