ಅತಿವೃಷ್ಟಿ ಸಂತ್ರಸ್ತರಿಗೆ ಪರಿಹಾರ ವಿತರಿಸಿ: ರೈತ ಕೃಷಿ ಕಾರ್ಮಿಕ ಸಂಘಟನೆ
ಈಚೆಗೆ ಸುರಿದ ನಿರಂತರ ಮಳೆಯಿಂದಾಗಿ ತಾಲ್ಲೂಕಿನ ಮೀರಾಪುರ ಗ್ರಾಮದಲ್ಲಿ ಸಾಕಷ್ಟು ಬೆಳೆ ನಷ್ಟ ಹಾಗೂ ಮನೆಗಳಿಗೆ ಹಾನಿಯಾಗಿದೆ. ಈ ಕುರಿತು ಪರಿಶೀಲಿಸಿ ಕೂಡಲೇ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್ ಕೆಎಸ್) ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.Last Updated 4 ನವೆಂಬರ್ 2020, 3:39 IST