ಪಾಲಿಕೆ ನೈರ್ಮಲ್ಯ ನಿರೀಕ್ಷಕನಿಗೆ ₹1 ಕೋಟಿ ದಂಡ, 4 ವರ್ಷ ಸಜೆ
ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ ಸಾಬೀತಾಗಿದ್ದು, ಅವರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ದಂಡ ಕಟ್ಟಲು ಶಿವಾನಂದ ಕೊಂಡಗುಳಿ ವಿಫಲನಾದರೆ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ತೀರ್ಪಿನಲ್ಲಿ ಹೇಳಿದ್ದಾರೆ.Last Updated 14 ಅಕ್ಟೋಬರ್ 2022, 14:13 IST