ನನ್ನ ಕೆನ್ನೆಗೆ ಹೊಡೆದಿದ್ದು ನಿಜ: ಮಾಜಿ ಶಾಸಕ ಮೊಹಿಯುದ್ದೀನ್ ಬಾವ
‘ಕಾಂಗ್ರೆಸ್ನ ಮಾಜಿ ಮೇಯರ್ ಗುಲ್ಝಾರ್ ಬಾನು ಅವರ ಪುತ್ರ ಅಜೀಂ ನನ್ನ ಕೆನ್ನೆಗೆ ಹೊಡೆದಿದ್ದು ನಿಜ. ನನ್ನ ಆಪ್ತ ಕಾರ್ಯದರ್ಶಿಗೂ ಪೆಟ್ಟು ಬಿದ್ದಿರುವುದರಿಂದ ಪ್ರಕರಣ ದಾಖಲಾಗಿದೆ. ಆದರೆ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕರಣ ವಾಪಸ್ ಪಡೆಯುವಂತೆ ನನ್ನ ಮೇಲೆ ಒತ್ತಡ ಹೇರಿದರು’ ಎಂದು ಮಾಜಿ ಶಾಸಕ ಮಾಜಿಬಿ.ಎ. ಮೊಹಿಯುದ್ದೀನ್ ಬಾವ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.Last Updated 1 ನವೆಂಬರ್ 2019, 13:21 IST