ದಫನ ಭೂಮಿ ದಾಖಲೆಗೆ ಆಗ್ರಹ: ಗ್ರಾ.ಪಂ ಮುಂಭಾಗ ದಲಿತ್ ಸೇವಾ ಸಮಿತಿ ಪ್ರತಿಭಟನೆ
ಪೆರುವಾಯಿ ಗ್ರಾಮದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಇರುವ ದಫನ ಭೂಮಿಗೆ ದಾಖಲೆಪತ್ರ ಒದಗಿಸಲು ಪೆರುವಾಯಿ ಗ್ರಾಮ ಪಂಚಾಯಿತಿ ಆಡಳಿತ ಅನುಮತಿ ನೀಡದೇ ಇರುವುದನ್ನು ವಿರೋಧಿಸಿ ಹಾಗೂ ತಕ್ಷಣವೇ ಈ ಜಾಗಕ್ಕೆ ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.Last Updated 27 ಆಗಸ್ಟ್ 2018, 11:36 IST