ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

OndallaEradalla

ADVERTISEMENT

ಮುಗ್ಧತೆಯ ಹೊತ್ತಿಗೆಯಲ್ಲಿ ಶುದ್ಧ ಮನುಷ್ಯತ್ವದ ಕಥನ

ಮಗುವಿನ ಮನಸ್ಸು ಮುಗ್ಧತೆಯ ಆಗರ. ಆದರೆ, ಇಂದಿನ ಬಹುತೇಕ ಮಕ್ಕಳಲ್ಲಿ ಮುಗ್ಧತೆ ಮಾಯವಾಗಿದೆ. ಇನ್ನೊಂದೆಡೆ ರಾಜಕೀಯ ಲಾಭದ ಹಾಲು ಕರೆಯಲು ಕೆಚ್ಚಲಿಗೆ ಕೈಹಾಕುವ ಜನರಿಗೆ ಹಸುವಿನ ಮುಗ್ಧತೆ ಅರ್ಥವಾಗುವುದಿಲ್ಲ. ಮೂಲರೂಪ ಮರೆತು ಪರಸ್ಪರ ಕೆಸರೆರಚಾಟ ನಡೆಸುತ್ತಿರುವ ನಮಗೆ ನಮ್ಮೊಳಗಿನ ಜೀವಸೆಲೆಯಾದ ಮನುಷ್ಯ ಧರ್ಮದ ಬಗ್ಗೆ ಅರಿವು ಇರುವುದಿಲ್ಲ. ನಾವು ನಿತ್ಯವೂ ಎದುರಿಸುತ್ತಿರುವ ಘೋರ ಸಮಸ್ಯೆಗಳನ್ನು ಕೊಂಚವೂ ವಾಚ್ಯಗೊಳಿಸದೆ ನವಿರಾದ ಹಾಸ್ಯದ ಮೂಲಕ ‘ಒಂದಲ್ಲಾ ಎರಡಲ್ಲಾ’ ಚಿತ್ರದಲ್ಲಿ ಸೂಕ್ಷ್ಮವಾಗಿ ನೇಯ್ದಿದ್ದಾರೆ ನಿರ್ದೇಶಕ ಡಿ. ಸತ್ಯಪ್ರಕಾಶ್‌. ಈ ಚಿತ್ರದಲ್ಲಿ ಮಾನವೀಯತೆ ಸಾರುವ ಗಟ್ಟಿಯಾದ ಕತೆಯಿದೆ.
Last Updated 24 ಆಗಸ್ಟ್ 2018, 10:12 IST
ಮುಗ್ಧತೆಯ ಹೊತ್ತಿಗೆಯಲ್ಲಿ ಶುದ್ಧ ಮನುಷ್ಯತ್ವದ ಕಥನ
ADVERTISEMENT
ADVERTISEMENT
ADVERTISEMENT
ADVERTISEMENT