ಬಿಜೆಪಿ ಸೇರಲಾರೆ, ವದಂತಿಗಳಿಗೆ ಕಿವಿಗೊಡದಿರಿ: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ
ಜೆಡಿಎಸ್ ಮುಖಂಡ ಪಿಳ್ಳಮುನಿಶಾಮಪ್ಪ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಮುಖಂಡರಲ್ಲಿ ಕುತೂಹಲ ಮೂಡಿಸಿದೆ. ಇದರ ನಡುವೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹರಡಿದೆ. ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್ ಪರವಾಗಿ ಚುನಾವಣೆ ಪ್ರಚಾರದಲ್ಲೂ ಪಾಲ್ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಜೆಡಿಎಸ್ನಿಂದ ಟಿಕೆಟ್ ನಿರಾಕರಿಸಿತ್ತು.Last Updated 22 ನವೆಂಬರ್ 2019, 12:54 IST