ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಬಂಡಾಯ: ಏ.14ರಂದು ಜೆಡಿಎಸ್ ಸೇರ್ಪಡೆ
‘ನಾನು ಅಧಿಕಾರದ ಹಿಂದೆ ಹೋದವನಲ್ಲ. ಸ್ವಾಭಿಮಾನಕ್ಕೆ ಚ್ಯುತಿಯುಂಟು ಮಾಡಿದವರಿಗೆ ತಕ್ಕ ಉತ್ತರ ನೀಡಲಿದ್ದೇನೆ. ಪೂರ್ವ ಷರತ್ತು ವಿಧಿಸದೇ ಜೆಡಿಎಸ್ ಸೇರ್ಪಡೆಯಾಗುತ್ತಿದ್ದೇನೆ. ಟಿಕೆಟ್ ವಿಚಾರ ಇನ್ನೂ ತೀರ್ಮಾನವಾಗಿಲ್ಲ. ಪಕ್ಷ ಸೇರ್ಪಡೆಯಾದ ಬಳಿಕ ಇದು ನಿರ್ಧಾರವಾಗಲಿದೆ’ ಎಂದು ಜಿ.ರಘು ಆಚಾರ್ ಅವರು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.Last Updated 7 ಏಪ್ರಿಲ್ 2023, 11:57 IST