ರಸ್ತೆಬದಿ ಅರಳಿದ ಸ್ವರ್ಣಪುಷ್ಪ
ವಿಜಯಪುರ ತಾಲ್ಲೂಕಿನ ಕೆಲ ಭಾಗಗಳಲ್ಲಿ ಇತ್ತೀಚೆಗೆ ಬಿದ್ದ ಮಳೆರಾಯ ಕಕ್ಕೆ ಹೂವನ್ನು ಅರಳಿಸಿದ್ದಾನೆ. ಅಲ್ಲಲ್ಲಿ ಬೆಳೆದ ಕಕ್ಕೆ ಮರಗಳು ಹೂಬಿಟ್ಟು ಕಂಗೊಳಿಸುತ್ತಿವೆ. ಕಾಡು ಹೂವಿನ ಸೊಬಗು ಮತ್ತು ಘಮಲು ಎಲ್ಲೆಡೆ ಆವರಿಸಿದೆ. ವಿಜಯಪುರದಿಂದ ದೇವನಹಳ್ಳಿಗೆ ಸಂಚರಿಸುವ ರಸ್ತೆಯ ಇಕ್ಕೆಲಗಳಲ್ಲಿ ಪ್ರಯಾಣಿಕರಲ್ಲಿ ಮಂದಹಾಸ ಮೂಡಿಸುತ್ತಿದೆ.Last Updated 8 ಮೇ 2019, 13:07 IST