ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಸಾಹಿತ್ಯದ ಶ್ರೇಷ್ಠತೆ ಸಾರಲು ಪ್ರಯತ್ನಿಸುವೆ: ಡಾ.ಚಂದ್ರಶೇಖರ ಕಂಬಾರ

Last Updated 12 ಫೆಬ್ರುವರಿ 2018, 12:13 IST
ಅಕ್ಷರ ಗಾತ್ರ

‌ನವದೆಹಲಿ: ಭಾರತ ಸಾಹಿತ್ಯದ ಶ್ರೇಷ್ಠತೆಯನ್ನು ಸಾರಲು ಪ್ರಯತ್ನಿಸುವುದಾಗಿ  ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಹೇಳಿದರು.

</p><p>‘ಕೇಂದ್ರ ಸಾಹಿತ್ಯ ಅಕಾಡೆಮಿಗೆ ಬಹುದೊಡ್ಡ ಪರಂಪರೆ ಇದೆ. ಬಹಳಷ್ಟು ಭಾಷೆಗಳನ್ನು ಒಂದುಗೂಡಿಸಿ ಸಾಗುತ್ತಿರುವ ದೇಶದ ಬಹುದೊಡ್ಡ ಬೌದ್ಧಿಕ ಸಂಸ್ಥೆಯನ್ನು ಮುನ್ನಡೆಸುವ ಅವಕಾಶ ದೊರೆತಿರುವುದು ಭಾಗ್ಯ. ಹಿಂದಿನ ಹಿರಿಯರಿಗೆ ಕಳಂಕ ಬಾರದಂತೆ ಹಾಗೂ  ಭಾರತ ಸಾಹಿತ್ಯದ ಶ್ರೇಷ್ಠತೆಯನ್ನು ಸಾರಲು ಪ್ರಯತ್ನಿಸುತ್ತೇನೆ’ ಎಂದರು.</p><p>ಅಕಾಡೆಮಿಯ ಈ ಹಿಂದಿನ ಅಧ್ಯಕ್ಷರು ಡಾ. ವಿಶ್ವನಾಥ ಪ್ರಸಾದ್ ತಿವಾರಿ. ಕನ್ನಡ ಸಾಹಿತಿಗಳ ಪೈಕಿ ವಿ.ಕೃ. ಗೋಕಾಕ,  ಡಾ.ಯು. ಆರ್. ಅನಂತಮೂರ್ತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT