<p>ಧಾರವಾಡ: ‘ವೈದ್ಯಕೀಯ ಕ್ಷೇತ್ರದಲ್ಲಿ ‘ಇಮೇಜ್’ ಸಂಸ್ಕರಣೆ ಪ್ರಾಮುಖ್ಯತೆ ಪಡೆದಿದೆ. ಈ ಕ್ಷೇತ್ರದಲ್ಲಿನ ನವತಂತ್ರಜ್ಞಾನಗಳು ಚಿಕಿತ್ಸೆ ನಿಟ್ಟಿನಲ್ಲಿ ಸಹಕಾರಿಯಾಗಿವೆ’ ಎಂದು ಬೆಂಗಳೂರಿನ ಐಟಿಐಇ ನಾಲೆಡ್ಜ್ ಸಲ್ಯೂಷನ್ಸ್ ಸಂಸ್ಥಾಪಕ ಸಂಜೀವ್ ಕುಬಕಡ್ಡಿ ಹೇಳಿದರು.</p>.<p>ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಬೋಧಕ ಅಭಿವೃದ್ಧಿ ಕಾರ್ಯಕ್ರಮದ (ಎಫ್ಡಿಪಿ) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ರೋಗಗಳ ಪತ್ತೆ, ವಿಶ್ಲೇಷಣೆ ಚಿಕಿತ್ಸೆಗೆ ಸಂಬಂಧಿಸಿದಂತೆ ‘ಇಮೇಜ್’ ಸಂಸ್ಕರಣೆ ಕ್ಷೇತ್ರದಲ್ಲಿನ ಸಂಶೋಧನೆಗಳು ವೈದ್ಯರಿಗೆ ಸಹಕಾರಿಯಾಗಿವೆ. ಸವಾಲುಗಳು, ನವತಂತ್ರಜ್ಞಾನಗಳನ್ನು ಶಿಕ್ಷಕರು ತಿಳಿದುಕೊಳ್ಳಬೇಕು’ ಎಂದರು.</p>.<p>ಐಐಟಿ ಪ್ರಾಧ್ಯಾಪಕ ನವೀನ್ ಎಂ.ಬಿ ಮಾತನಾಡಿ, ‘ಕೃತಕ ಬುದ್ಧಿಮತ್ತೆ (ಎಐ) ಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಎಐ ಬಳಕೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು’ ಎಂದರು.</p>.<p>‘ಆಳವಾದ ಅಧ್ಯಯನದ ಜತೆಗೆ ಪ್ರಾಯೋಗಿಕ ಕಲಿಕೆ ಮುಖ್ಯ. ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಎಐ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂ ಶಿಕ್ಷಣ ಸೊಸೈಟಿ ಕಾರ್ಯದರ್ಶಿ ಜೀವಂಧರಕುಮಾರ ಮಾತನಾಡಿ, ‘ವೈದ್ಯಕೀಯ ಕ್ಷೇತ್ರದಲ್ಲಿ ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಚಿಕಿತ್ಸೆಗಳನ್ನು ನೆರವೇರಿಸಲು ನವೀನ ತಂತ್ರಜ್ಞಾನಗಳು ಸಹಕಾರಿಯಾಗಿವೆ. ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಲು ಇಂಥ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸುವುದು ಅವಶ್ಯ’ ಎಂದರು.</p>.<p>ಸತೀಶ್ ಎಸ್.ಭೈರಣ್ಣವರ್, ಎಫ್ಡಿಪಿ ಸಹ ಸಂಯೋಜಕಿ ಪ್ರೊ.ರೇಷ್ಮಾ ನದಾಫ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-24-1905906949</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ವೈದ್ಯಕೀಯ ಕ್ಷೇತ್ರದಲ್ಲಿ ‘ಇಮೇಜ್’ ಸಂಸ್ಕರಣೆ ಪ್ರಾಮುಖ್ಯತೆ ಪಡೆದಿದೆ. ಈ ಕ್ಷೇತ್ರದಲ್ಲಿನ ನವತಂತ್ರಜ್ಞಾನಗಳು ಚಿಕಿತ್ಸೆ ನಿಟ್ಟಿನಲ್ಲಿ ಸಹಕಾರಿಯಾಗಿವೆ’ ಎಂದು ಬೆಂಗಳೂರಿನ ಐಟಿಐಇ ನಾಲೆಡ್ಜ್ ಸಲ್ಯೂಷನ್ಸ್ ಸಂಸ್ಥಾಪಕ ಸಂಜೀವ್ ಕುಬಕಡ್ಡಿ ಹೇಳಿದರು.</p>.<p>ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಬೋಧಕ ಅಭಿವೃದ್ಧಿ ಕಾರ್ಯಕ್ರಮದ (ಎಫ್ಡಿಪಿ) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ರೋಗಗಳ ಪತ್ತೆ, ವಿಶ್ಲೇಷಣೆ ಚಿಕಿತ್ಸೆಗೆ ಸಂಬಂಧಿಸಿದಂತೆ ‘ಇಮೇಜ್’ ಸಂಸ್ಕರಣೆ ಕ್ಷೇತ್ರದಲ್ಲಿನ ಸಂಶೋಧನೆಗಳು ವೈದ್ಯರಿಗೆ ಸಹಕಾರಿಯಾಗಿವೆ. ಸವಾಲುಗಳು, ನವತಂತ್ರಜ್ಞಾನಗಳನ್ನು ಶಿಕ್ಷಕರು ತಿಳಿದುಕೊಳ್ಳಬೇಕು’ ಎಂದರು.</p>.<p>ಐಐಟಿ ಪ್ರಾಧ್ಯಾಪಕ ನವೀನ್ ಎಂ.ಬಿ ಮಾತನಾಡಿ, ‘ಕೃತಕ ಬುದ್ಧಿಮತ್ತೆ (ಎಐ) ಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಎಐ ಬಳಕೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು’ ಎಂದರು.</p>.<p>‘ಆಳವಾದ ಅಧ್ಯಯನದ ಜತೆಗೆ ಪ್ರಾಯೋಗಿಕ ಕಲಿಕೆ ಮುಖ್ಯ. ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಎಐ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂ ಶಿಕ್ಷಣ ಸೊಸೈಟಿ ಕಾರ್ಯದರ್ಶಿ ಜೀವಂಧರಕುಮಾರ ಮಾತನಾಡಿ, ‘ವೈದ್ಯಕೀಯ ಕ್ಷೇತ್ರದಲ್ಲಿ ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಚಿಕಿತ್ಸೆಗಳನ್ನು ನೆರವೇರಿಸಲು ನವೀನ ತಂತ್ರಜ್ಞಾನಗಳು ಸಹಕಾರಿಯಾಗಿವೆ. ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಲು ಇಂಥ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸುವುದು ಅವಶ್ಯ’ ಎಂದರು.</p>.<p>ಸತೀಶ್ ಎಸ್.ಭೈರಣ್ಣವರ್, ಎಫ್ಡಿಪಿ ಸಹ ಸಂಯೋಜಕಿ ಪ್ರೊ.ರೇಷ್ಮಾ ನದಾಫ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-24-1905906949</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>