ಔರಾದ್: ತಾಲ್ಲೂಕಿನ ಸಂತಪುರದಲ್ಲಿ ಬುಧವಾರ ಆಶಾ ಕಾರ್ಯಕರ್ತೆಯರು ಮತ್ತು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಮತದಾನ ಜಾಗೃತಿ ಜಾಥಾ ನಡೆಯಿತು.ಗ್ರಾಮ ಪಂಚಾಯಿತಿ ಕಚೇರಿಯಿಂದ ಹೊರಟ ಜಾಥಾ ಸರ್ಕಾರಿ ಆಸ್ಪತ್ರೆ, ಬಸವೇಶ್ವರ ವೃತ್ತದ ಮೂಲಕ ನಾಡ ಕಚೇರಿಗೆ ತಲುಪಿತು.ಕಂದಾಯ ನಿರೀಕ್ಷಕ ಅನ್ವರ್ ಜಕಾತಿ ಮಾತನಾಡಿ, ‘ಭಾರತ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಿಂತಿದೆ. ಈ ವ್ಯವಸ್ಥೆ ಸುಗಮವಾಗಿ ನಡೆಯಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.