<p><strong>ರಾಯಚೂರು</strong>: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರು ರಾಯರ 423ನೇ ವರ್ಧಂತಿ ಉತ್ಸವವು ಭಕ್ತಿ, ಭಾವದೊಂದಿಗೆ ಗುರುವಾರ ಸಂಭ್ರಮದಿಂದ ನೆರವೇರಿತು.</p>.<p>ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ, ಪುಷ್ಪ ಅಲಂಕಾರ ಮಾಡಲಾಗಿತ್ತು. ತಿರುಪತಿ ತಿರುಮಲ ದೇವಸ್ಥಾನದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರಿಗೆ ಸಮರ್ಪಿಸಿದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ರಾಯರಿಗೆ ಅಕ್ಷಯಪಾತ್ರೆ ಸಮರ್ಪಿಸಲಾಯಿತು.</p>.<p>ಚೆನ್ನೈನ ನಾದಹಾರ ಸೇವಾ ಟ್ರಸ್ಟ್ನಿಂದ 14ನೇ ವರ್ಷದ ನಾದಹಾರ ಸಮರ್ಪಣೆ ಕಾರ್ಯಕ್ರಮ ವಿಶೇಷವಾಗಿತು. ದೇವಸ್ಥಾನದ ಪ್ರಕಾರದಲ್ಲಿ 450 ಗಾಯಕರು ವಿವಿಧ ವಾದ್ಯಗಳನ್ನು ನುಡಿಸುವ ಮೂಲಕ ಸಾಮೂಹಿಕವಾಗಿ ಕೀರ್ತನೆಗಳನ್ನು ಹಾಡಿದರು.</p>.<p>ಉತ್ಸವದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಪ್ರಧಾನ ಅರ್ಚಕ ಶೇಷಾದ್ರಿ ಆಚಾರ್ಯರು, ರಾಜ ಎಸ್. ಗಿರಿಜಾಚಾರ್ಯರು, ದೇಶದ ಮೂಲೆ, ಮೂಲೆಗಳಿಂದ ವಿದ್ವಾಂಸರು ಭಕ್ತಾದಿಗಳು ಭಾಗವಹಿಸಿದ್ದರು.</p>.<p>ವಿಜೃಂಭಣೆಯಿಂದ ರಥೋತ್ಸವ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರು ರಾಯರ 423ನೇ ವರ್ಧಂತಿ ಉತ್ಸವವು ಭಕ್ತಿ, ಭಾವದೊಂದಿಗೆ ಗುರುವಾರ ಸಂಭ್ರಮದಿಂದ ನೆರವೇರಿತು.</p>.<p>ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ, ಪುಷ್ಪ ಅಲಂಕಾರ ಮಾಡಲಾಗಿತ್ತು. ತಿರುಪತಿ ತಿರುಮಲ ದೇವಸ್ಥಾನದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರಿಗೆ ಸಮರ್ಪಿಸಿದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ರಾಯರಿಗೆ ಅಕ್ಷಯಪಾತ್ರೆ ಸಮರ್ಪಿಸಲಾಯಿತು.</p>.<p>ಚೆನ್ನೈನ ನಾದಹಾರ ಸೇವಾ ಟ್ರಸ್ಟ್ನಿಂದ 14ನೇ ವರ್ಷದ ನಾದಹಾರ ಸಮರ್ಪಣೆ ಕಾರ್ಯಕ್ರಮ ವಿಶೇಷವಾಗಿತು. ದೇವಸ್ಥಾನದ ಪ್ರಕಾರದಲ್ಲಿ 450 ಗಾಯಕರು ವಿವಿಧ ವಾದ್ಯಗಳನ್ನು ನುಡಿಸುವ ಮೂಲಕ ಸಾಮೂಹಿಕವಾಗಿ ಕೀರ್ತನೆಗಳನ್ನು ಹಾಡಿದರು.</p>.<p>ಉತ್ಸವದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಪ್ರಧಾನ ಅರ್ಚಕ ಶೇಷಾದ್ರಿ ಆಚಾರ್ಯರು, ರಾಜ ಎಸ್. ಗಿರಿಜಾಚಾರ್ಯರು, ದೇಶದ ಮೂಲೆ, ಮೂಲೆಗಳಿಂದ ವಿದ್ವಾಂಸರು ಭಕ್ತಾದಿಗಳು ಭಾಗವಹಿಸಿದ್ದರು.</p>.<p>ವಿಜೃಂಭಣೆಯಿಂದ ರಥೋತ್ಸವ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>