<p>ಶ್ರವಣಬೆಳಗೊಳ: ಇಲ್ಲಿಯ ಗೊಮ್ಮಟ ನಗರದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಭಾಂಗಣದಲ್ಲಿ ರಾಜ್ಯ ಮಟ್ಟದ ಹ್ಯಾಕಥಾನ್ ಸ್ಪರ್ಧೆಯನ್ನು ಏಪ್ರಿಲ್ 10 ಮತ್ತು 11ರಂದು ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>ಸಾಫ್ಟ್ವೇರ್ ಅಭಿವೃದ್ಧಿ ಪ್ರೋಗ್ರಾಮಿಂಗ್ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಸೃಜನಾತ್ಮಕ ಸ್ಪರ್ಧೆಯಾಗಿದೆ. ತಂತ್ರಜ್ಞಾನದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಾರ್ಯಾಗಾರವಾಗಿದ್ದು, ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ 77 ತಂಡಗಳು ಈಗಾಗಲೇ ತಮ್ಮ ಹೆಸರು ನೊಂದಾಯಿಸಿವೆ ಎಂದು ಹೇಳಿದ್ದಾರೆ.</p>.<p>ಈ ಸ್ಪರ್ಧೆಯಲ್ಲಿ ಅರ್ಹತೆ ಗಳಿಸುವ ಮೊದಲ ತಂಡದ 4 ವಿದ್ಯಾರ್ಥಿಗಳಿಗೆ ಖಾತರಿಯಾಗಿ ಉದ್ಯೋಗ ಲಭಿಸಲಿದೆ. 2 ಮತ್ತು 3ನೇ ಸ್ಥಾನ ಪಡೆಯುವ ತಂಡಗಳಿಗೆ ಉಚಿತ ಇಂಟರ್ನ್ಶಿಪ್ ಸೌಲಭ್ಯ ದೊರೆಯಲಿದೆ ಎಂದರು.</p>.<p>ನಗದು ಬಹುಮಾನವಾಗಿ ₹50 ಸಾವಿರ ನಿಗದಿ ಮಾಡಿದ್ದು, ಮೊದಲ ಬಹುಮಾನ ₹25 ಸಾವಿರ, ದ್ವಿತೀಯ ₹15 ಸಾವಿರ ಹಾಗೂ ತೃತೀಯ ₹10 ಸಾವಿರ ನಗದು ಬಹುಮಾನ ನೀಡಲಾಗುತ್ತಿದೆ. ಸ್ಪರ್ಧೆಯ ನಿರ್ವಹಣೆಯನ್ನು ಬಾಹುಬಲಿ ತಾಂತ್ರಿಕ ಕಾಲೇಜು ನಿರ್ವಹಿಸಲಿದ್ದು, ಉದ್ಯೋಗ ಇನ್ನಿತರೆ ಸೌಲಭ್ಯವನ್ನು ಡಿಎಸ್ಎಡಿಫೈ ಕಂಪನಿ ಒದಗಿಸಲಿದೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-44-984968964</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರವಣಬೆಳಗೊಳ: ಇಲ್ಲಿಯ ಗೊಮ್ಮಟ ನಗರದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಭಾಂಗಣದಲ್ಲಿ ರಾಜ್ಯ ಮಟ್ಟದ ಹ್ಯಾಕಥಾನ್ ಸ್ಪರ್ಧೆಯನ್ನು ಏಪ್ರಿಲ್ 10 ಮತ್ತು 11ರಂದು ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>ಸಾಫ್ಟ್ವೇರ್ ಅಭಿವೃದ್ಧಿ ಪ್ರೋಗ್ರಾಮಿಂಗ್ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಸೃಜನಾತ್ಮಕ ಸ್ಪರ್ಧೆಯಾಗಿದೆ. ತಂತ್ರಜ್ಞಾನದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಾರ್ಯಾಗಾರವಾಗಿದ್ದು, ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ 77 ತಂಡಗಳು ಈಗಾಗಲೇ ತಮ್ಮ ಹೆಸರು ನೊಂದಾಯಿಸಿವೆ ಎಂದು ಹೇಳಿದ್ದಾರೆ.</p>.<p>ಈ ಸ್ಪರ್ಧೆಯಲ್ಲಿ ಅರ್ಹತೆ ಗಳಿಸುವ ಮೊದಲ ತಂಡದ 4 ವಿದ್ಯಾರ್ಥಿಗಳಿಗೆ ಖಾತರಿಯಾಗಿ ಉದ್ಯೋಗ ಲಭಿಸಲಿದೆ. 2 ಮತ್ತು 3ನೇ ಸ್ಥಾನ ಪಡೆಯುವ ತಂಡಗಳಿಗೆ ಉಚಿತ ಇಂಟರ್ನ್ಶಿಪ್ ಸೌಲಭ್ಯ ದೊರೆಯಲಿದೆ ಎಂದರು.</p>.<p>ನಗದು ಬಹುಮಾನವಾಗಿ ₹50 ಸಾವಿರ ನಿಗದಿ ಮಾಡಿದ್ದು, ಮೊದಲ ಬಹುಮಾನ ₹25 ಸಾವಿರ, ದ್ವಿತೀಯ ₹15 ಸಾವಿರ ಹಾಗೂ ತೃತೀಯ ₹10 ಸಾವಿರ ನಗದು ಬಹುಮಾನ ನೀಡಲಾಗುತ್ತಿದೆ. ಸ್ಪರ್ಧೆಯ ನಿರ್ವಹಣೆಯನ್ನು ಬಾಹುಬಲಿ ತಾಂತ್ರಿಕ ಕಾಲೇಜು ನಿರ್ವಹಿಸಲಿದ್ದು, ಉದ್ಯೋಗ ಇನ್ನಿತರೆ ಸೌಲಭ್ಯವನ್ನು ಡಿಎಸ್ಎಡಿಫೈ ಕಂಪನಿ ಒದಗಿಸಲಿದೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-44-984968964</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>