<p>ಅರಕಲಗೂಡು: ‘ನೇಕಾರ ಸಮುದಾಯವು ಸರ್ಕಾರದ ಮೀಸಲಾತಿ ಹಾಗೂ ಲಭ್ಯವಿರುವ ಆರ್ಥಿಕ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ತಹಶೀಲ್ದಾರ್ ಸೌಮ್ಯ ತಿಳಿಸಿದರು.</p>.<p>ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸೋಮವಾರ ಏರ್ಪಡಿಸಿದ್ದ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನೇಕಾರ ಸಮುದಾಯಗಳ ಏಳಿಗೆಗಾಗಿ ರಾಜ್ಯ ಸರ್ಕಾರ ನೇಕಾರರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದ್ದು, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ನೇಕಾರರಿಗೆ ಹಲವು ಸವಲತ್ತುಗಳು ಲಭ್ಯವಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಸಮಾಜದ ಪ್ರಗತಿಗೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆ ಅತ್ಯವಶ್ಯಕವಾಗಿದ್ದು, ಈ ಮೂರೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದು ಅಗತ್ಯ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ. ಎ. ನಂಜುಂಡಸ್ವಾಮಿ ಮಾತನಾಡಿ, ‘ದಾಸಿಮಯ್ಯನವರು 11ನೇ ಶತಮಾನದಲ್ಲೇ ವಚನ ಸಾಹಿತ್ಯಕ್ಕೆ ಭದ್ರ ಬುನಾದಿ ಹಾಕಿದ ಆದ್ಯ ವಚನಕಾರರಾಗಿದ್ದಾರೆ. ಅವರ ವಚನಗಳು 12ನೇ ಶತಮಾನದ ಬಸವಣ್ಣನವರ ಕಾಲದ ವಚನ ಚಳುವಳಿಗೆ ಪ್ರೇರಣೆ ನೀಡಿದವು’ ಎಂದು ಸ್ಮರಿಸಿದರು.</p>.<p>ಉಪನ್ಯಾಸ ನೀಡಿದ ಆಲೂರಿನ ಉಪನ್ಯಾಸಕ ಶಿವಕುಮಾರ್, ‘ದಾಸಿಮಯ್ಯ ಅವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಮೂಢನಂಬಿಕೆ, ಜಾತಿಯತೆ, ಸ್ತ್ರೀ-ಪುರುಷ ಅಸಮಾನತೆ ಮತ್ತು ಡಾಂಬಿಕ ಭಕ್ತಿಯನ್ನು ತೀವ್ರವಾಗಿ ಖಂಡಿಸಿದರು. ವಚನ ಚಳುವಳಿಯ ಮೂಲಕ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಣೆಗೆ ಅವರು ನೀಡಿದ ಕೊಡುಗೆ ಇಂದಿಗೂ ಪ್ರಸ್ತುತ’ ಎಂದರು.</p>.<p>ಮುಖಂಡರಾದ ಪಾಂಡು ವಿಠ್ಠಲ ಶೆಟ್ಟಿ, ರಾಮಕೃಷ್ಣ, ಬನಶಂಕರಿ ನೇಕಾರ ಸಹಕಾರ ಸಂಘದ ಕಾರ್ಯದರ್ಶಿ ಶಿವಕುಮಾರ್, ನೇಕಾರ ಸಮಾಜದ ಮುಖಂಡರು, ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-36-2120964573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಕಲಗೂಡು: ‘ನೇಕಾರ ಸಮುದಾಯವು ಸರ್ಕಾರದ ಮೀಸಲಾತಿ ಹಾಗೂ ಲಭ್ಯವಿರುವ ಆರ್ಥಿಕ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ತಹಶೀಲ್ದಾರ್ ಸೌಮ್ಯ ತಿಳಿಸಿದರು.</p>.<p>ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸೋಮವಾರ ಏರ್ಪಡಿಸಿದ್ದ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನೇಕಾರ ಸಮುದಾಯಗಳ ಏಳಿಗೆಗಾಗಿ ರಾಜ್ಯ ಸರ್ಕಾರ ನೇಕಾರರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದ್ದು, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ನೇಕಾರರಿಗೆ ಹಲವು ಸವಲತ್ತುಗಳು ಲಭ್ಯವಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಸಮಾಜದ ಪ್ರಗತಿಗೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆ ಅತ್ಯವಶ್ಯಕವಾಗಿದ್ದು, ಈ ಮೂರೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದು ಅಗತ್ಯ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ. ಎ. ನಂಜುಂಡಸ್ವಾಮಿ ಮಾತನಾಡಿ, ‘ದಾಸಿಮಯ್ಯನವರು 11ನೇ ಶತಮಾನದಲ್ಲೇ ವಚನ ಸಾಹಿತ್ಯಕ್ಕೆ ಭದ್ರ ಬುನಾದಿ ಹಾಕಿದ ಆದ್ಯ ವಚನಕಾರರಾಗಿದ್ದಾರೆ. ಅವರ ವಚನಗಳು 12ನೇ ಶತಮಾನದ ಬಸವಣ್ಣನವರ ಕಾಲದ ವಚನ ಚಳುವಳಿಗೆ ಪ್ರೇರಣೆ ನೀಡಿದವು’ ಎಂದು ಸ್ಮರಿಸಿದರು.</p>.<p>ಉಪನ್ಯಾಸ ನೀಡಿದ ಆಲೂರಿನ ಉಪನ್ಯಾಸಕ ಶಿವಕುಮಾರ್, ‘ದಾಸಿಮಯ್ಯ ಅವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಮೂಢನಂಬಿಕೆ, ಜಾತಿಯತೆ, ಸ್ತ್ರೀ-ಪುರುಷ ಅಸಮಾನತೆ ಮತ್ತು ಡಾಂಬಿಕ ಭಕ್ತಿಯನ್ನು ತೀವ್ರವಾಗಿ ಖಂಡಿಸಿದರು. ವಚನ ಚಳುವಳಿಯ ಮೂಲಕ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಣೆಗೆ ಅವರು ನೀಡಿದ ಕೊಡುಗೆ ಇಂದಿಗೂ ಪ್ರಸ್ತುತ’ ಎಂದರು.</p>.<p>ಮುಖಂಡರಾದ ಪಾಂಡು ವಿಠ್ಠಲ ಶೆಟ್ಟಿ, ರಾಮಕೃಷ್ಣ, ಬನಶಂಕರಿ ನೇಕಾರ ಸಹಕಾರ ಸಂಘದ ಕಾರ್ಯದರ್ಶಿ ಶಿವಕುಮಾರ್, ನೇಕಾರ ಸಮಾಜದ ಮುಖಂಡರು, ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-36-2120964573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>