<p>ಚಿತ್ರದುರ್ಗ: ‘ಹಿಂದಿನ ಕಾಲದಲ್ಲಿ ಔಷಧೀಯ ಸಂಶೋಧನೆಗೆ ವರ್ಷಗಳೇ ಕಳೆಯುತ್ತಿದ್ದವು. ಈಗ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಸಮಯ ಉಳಿತಾಯದ ಜತೆಗೆ ಶೀಘ್ರ ಫಲಿತಾಂಶ ದೊರೆಯುತ್ತಿದೆ’ ಎಂದು ಎಸ್ಜೆಎಂ ವಿಶ್ವವಿದ್ಯಾಲಯದ ಕುಲಪತಿ ಕೆ.ಬಿ.ಗುಡಸಿ ತಿಳಿಸಿದರು.</p>.<p>ನಗರದ ಎಸ್ಜೆಎಂ ಔಷಧ ವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಐ-ಕ್ಲಾಪ್ ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ತಂತ್ರಜ್ಞಾನ ಬಳಕೆಯಿಂದ ಔಷಧಿಯನ್ನು ವೇಗವಾಗಿ ಕಂಡುಹಿಡಿಯಲಾಗುತ್ತಿದೆ. ಇಂತಹ ಹೊಸ ವಿಚಾರಗಳ ವಿನಿಮಯ ವಿಚಾರ ಸಂಕಿರಣದಲ್ಲಿ ಆಗಲಿದೆ’ ಎಂದರು.</p>.<p>‘ಮುಂಬರುವ ದಿನಗಳಲ್ಲಿ ನ್ಯಾನೋ ಪ್ಲಾಸ್ಟಿಕ್ ಮತ್ತು ಮಾದಕ ದ್ರವ್ಯಗಳು ಜನರನ್ನು ಅನಾರೋಗ್ಯದ ಕಡೆಗೆ ಒಯ್ಯುತ್ತವೆ’ ಎಂದು ಚಿತ್ರದುರ್ಗದ ವೈದ್ಯಕೀಯ ಕಾಲೇಜಿನ ಡೀನ್ ಡಾ.ಬಿ.ವೈ.ಯುವರಾಜ್ ಹೇಳಿದರು.</p>.<p>‘ಹಿಂದಿನ ಕಾಲದಲ್ಲಿ ಹಿರಿಯರು ಅಡುಗೆ ಮನೆಯನ್ನೇ ಔಷಧಾಲಯವನ್ನಾಗಿ ಮಾಡಿಕೊಂಡಿದ್ದರು. ಕರೋನಾ ಸಮಯದಲ್ಲಿ ಔಷಧಿ ತಜ್ಞರ ಕಾರ್ಯ ನಿಜಕ್ಕೂ ಸ್ಮರಣೀಯ’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>‘ಶಿಕ್ಷಣ ಮುಗಿಸಿದ ನಂತರ ಮುಂದೇನು ಏನು ಎಂಬ ಚಿಂತೆ ವಿದ್ಯಾರ್ಥಿಗಳಿಗೆ ಕಾಡುತ್ತದೆ. ತಂತ್ರಜ್ಞಾನ ಆಧರಿತ ಕೌಶಲ ರೂಢಿಸಿಕೊಳ್ಳದಿದ್ದರೆ ವೃತ್ತಿ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುವುದಿಲ್ಲ’ ಎಂದು ಎಸ್ಜೆಎಂ ವಿಶ್ವವಿದ್ಯಾಲಯದ ಕುಲಸಚಿವ ಗಣಾಚಾರಿ ಹೇಳಿದರು.</p>.<p>ಪ್ರಾಂಶುಪಾಲ ಡಾ.ಟಿ.ಎಸ್.ನಾಗರಾಜ, ಸಹಾಯಕ ಔಷಧ ನಿಯಂತ್ರಕ ಸಿ.ಎಚ್.ಗಿರೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-44-223334680</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಹಿಂದಿನ ಕಾಲದಲ್ಲಿ ಔಷಧೀಯ ಸಂಶೋಧನೆಗೆ ವರ್ಷಗಳೇ ಕಳೆಯುತ್ತಿದ್ದವು. ಈಗ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಸಮಯ ಉಳಿತಾಯದ ಜತೆಗೆ ಶೀಘ್ರ ಫಲಿತಾಂಶ ದೊರೆಯುತ್ತಿದೆ’ ಎಂದು ಎಸ್ಜೆಎಂ ವಿಶ್ವವಿದ್ಯಾಲಯದ ಕುಲಪತಿ ಕೆ.ಬಿ.ಗುಡಸಿ ತಿಳಿಸಿದರು.</p>.<p>ನಗರದ ಎಸ್ಜೆಎಂ ಔಷಧ ವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಐ-ಕ್ಲಾಪ್ ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ತಂತ್ರಜ್ಞಾನ ಬಳಕೆಯಿಂದ ಔಷಧಿಯನ್ನು ವೇಗವಾಗಿ ಕಂಡುಹಿಡಿಯಲಾಗುತ್ತಿದೆ. ಇಂತಹ ಹೊಸ ವಿಚಾರಗಳ ವಿನಿಮಯ ವಿಚಾರ ಸಂಕಿರಣದಲ್ಲಿ ಆಗಲಿದೆ’ ಎಂದರು.</p>.<p>‘ಮುಂಬರುವ ದಿನಗಳಲ್ಲಿ ನ್ಯಾನೋ ಪ್ಲಾಸ್ಟಿಕ್ ಮತ್ತು ಮಾದಕ ದ್ರವ್ಯಗಳು ಜನರನ್ನು ಅನಾರೋಗ್ಯದ ಕಡೆಗೆ ಒಯ್ಯುತ್ತವೆ’ ಎಂದು ಚಿತ್ರದುರ್ಗದ ವೈದ್ಯಕೀಯ ಕಾಲೇಜಿನ ಡೀನ್ ಡಾ.ಬಿ.ವೈ.ಯುವರಾಜ್ ಹೇಳಿದರು.</p>.<p>‘ಹಿಂದಿನ ಕಾಲದಲ್ಲಿ ಹಿರಿಯರು ಅಡುಗೆ ಮನೆಯನ್ನೇ ಔಷಧಾಲಯವನ್ನಾಗಿ ಮಾಡಿಕೊಂಡಿದ್ದರು. ಕರೋನಾ ಸಮಯದಲ್ಲಿ ಔಷಧಿ ತಜ್ಞರ ಕಾರ್ಯ ನಿಜಕ್ಕೂ ಸ್ಮರಣೀಯ’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>‘ಶಿಕ್ಷಣ ಮುಗಿಸಿದ ನಂತರ ಮುಂದೇನು ಏನು ಎಂಬ ಚಿಂತೆ ವಿದ್ಯಾರ್ಥಿಗಳಿಗೆ ಕಾಡುತ್ತದೆ. ತಂತ್ರಜ್ಞಾನ ಆಧರಿತ ಕೌಶಲ ರೂಢಿಸಿಕೊಳ್ಳದಿದ್ದರೆ ವೃತ್ತಿ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುವುದಿಲ್ಲ’ ಎಂದು ಎಸ್ಜೆಎಂ ವಿಶ್ವವಿದ್ಯಾಲಯದ ಕುಲಸಚಿವ ಗಣಾಚಾರಿ ಹೇಳಿದರು.</p>.<p>ಪ್ರಾಂಶುಪಾಲ ಡಾ.ಟಿ.ಎಸ್.ನಾಗರಾಜ, ಸಹಾಯಕ ಔಷಧ ನಿಯಂತ್ರಕ ಸಿ.ಎಚ್.ಗಿರೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-44-223334680</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>