<p>ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ನಕರಾಳು ತಾಂಡಾ, ನಾರಾಯಣದೇವರ ಕೆರೆ, ಕೊಪ್ಪಳ ಜಿಲ್ಲೆಯ ಕಾಸನಕಿಂಡಿ ಹಾಗೂ ಕಾತ್ರೀಕಿ ಗ್ರಾಮಗಳ ಬಳಿ ಇರುವ ತುಂಗಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಹಕ್ಕಿಗಳ ಆವಾಸ ಸ್ಥಾನಕ್ಕೆ ಧಕ್ಕೆ ಉಂಟಾಗುತ್ತಿದೆ.</p>.<p>ಇಲ್ಲಿನ ಪ್ರದೇಶ ಮರಳಿನಿಂದ ಕೂಡಿರುವುದರಿಂದ ‘ಲಿಟಲ್ ಟರ್ನ್’ ಪಕ್ಷಿಗಳು ಮೊಟ್ಟೆಗಳನ್ನಿಟ್ಟು ಸಂತಾನೋತ್ಪತ್ತಿ ನಡೆಸುತ್ತವೆ. ಈ ಪ್ರದೇಶದಲ್ಲಿ ರೈತರು ಅತಿಯಾದ ರಾಸಾಯನಿಕ ಬಳಕೆ ಮಾಡುವುದರಿಂದ ಜೈವಿಕ ವೈವಿಧ್ಯತೆಗೆ ಧಕ್ಕೆಯಾಗುತ್ತಿದೆ. ಜತೆಗೆ ಹಕ್ಕಿಗಳು ಹಾಗೂ ಅವುಗಳ ಮೊಟ್ಟೆಗಳು ನಾಯಿಗಳ ಪಾಲಾಗುತ್ತಿವೆ.</p>.<p>ಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯುವ ಉದ್ಧೇಶದಿಂದ ಹಕ್ಕಿಗಳ ಮೊಟ್ಟೆ ಹಾಗೂ ಅವುಗಳ ಆವಾಸ ಸ್ಥಾನಕ್ಕೆ ಹಾನಿಗೊಳಿಸುತ್ತಿದ್ದಾರೆ. ಈ ಸ್ಥಳದಲ್ಲಿ ಅರಣ್ಯ ಸಿಬ್ಬಂದಿ ನಿಯೋಜಿಸಿ, ಹಕ್ಕಿಗಳ ಆವಾಸ ಸ್ಥಾನವನ್ನು ರಕ್ಷಿಸಬೇಕು ಎಂದು ಪಕ್ಷಿ ತಜ್ಞ ವಿಜಯ್ ಇಟ್ಟಿಗಿ ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-25-1449070984</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ನಕರಾಳು ತಾಂಡಾ, ನಾರಾಯಣದೇವರ ಕೆರೆ, ಕೊಪ್ಪಳ ಜಿಲ್ಲೆಯ ಕಾಸನಕಿಂಡಿ ಹಾಗೂ ಕಾತ್ರೀಕಿ ಗ್ರಾಮಗಳ ಬಳಿ ಇರುವ ತುಂಗಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಹಕ್ಕಿಗಳ ಆವಾಸ ಸ್ಥಾನಕ್ಕೆ ಧಕ್ಕೆ ಉಂಟಾಗುತ್ತಿದೆ.</p>.<p>ಇಲ್ಲಿನ ಪ್ರದೇಶ ಮರಳಿನಿಂದ ಕೂಡಿರುವುದರಿಂದ ‘ಲಿಟಲ್ ಟರ್ನ್’ ಪಕ್ಷಿಗಳು ಮೊಟ್ಟೆಗಳನ್ನಿಟ್ಟು ಸಂತಾನೋತ್ಪತ್ತಿ ನಡೆಸುತ್ತವೆ. ಈ ಪ್ರದೇಶದಲ್ಲಿ ರೈತರು ಅತಿಯಾದ ರಾಸಾಯನಿಕ ಬಳಕೆ ಮಾಡುವುದರಿಂದ ಜೈವಿಕ ವೈವಿಧ್ಯತೆಗೆ ಧಕ್ಕೆಯಾಗುತ್ತಿದೆ. ಜತೆಗೆ ಹಕ್ಕಿಗಳು ಹಾಗೂ ಅವುಗಳ ಮೊಟ್ಟೆಗಳು ನಾಯಿಗಳ ಪಾಲಾಗುತ್ತಿವೆ.</p>.<p>ಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯುವ ಉದ್ಧೇಶದಿಂದ ಹಕ್ಕಿಗಳ ಮೊಟ್ಟೆ ಹಾಗೂ ಅವುಗಳ ಆವಾಸ ಸ್ಥಾನಕ್ಕೆ ಹಾನಿಗೊಳಿಸುತ್ತಿದ್ದಾರೆ. ಈ ಸ್ಥಳದಲ್ಲಿ ಅರಣ್ಯ ಸಿಬ್ಬಂದಿ ನಿಯೋಜಿಸಿ, ಹಕ್ಕಿಗಳ ಆವಾಸ ಸ್ಥಾನವನ್ನು ರಕ್ಷಿಸಬೇಕು ಎಂದು ಪಕ್ಷಿ ತಜ್ಞ ವಿಜಯ್ ಇಟ್ಟಿಗಿ ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-25-1449070984</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>