‘ಮೂಲವೇತನ, ತುಟ್ಟಿಭತ್ಯೆ ಹಾಗೂ ಮನೆಭತ್ಯೆ ಹೊರತುಪಡಿಸಿ ಬೇರಾವ ಸವಲತ್ತನ್ನೂ ನಿಗಮ ನಮಗೆ ನೀಡುತ್ತಿಲ್ಲ. ಸಿಬ್ಬಂದಿಯ ವೇತನ ಪರಿಷ್ಕರಣೆ, ವಸತಿಗೃಹ ಸೌಲಭ್ಯ, ಮಕ್ಕಳ ಶಿಕ್ಷಣಕ್ಕೆ ವಿಶೇಷ ಭತ್ಯೆ, ಕ್ಯಾಂಟೀನ್ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದ್ದೇವೆ’ ಎಂದು ಸಂಘದ ಉಪಾಧ್ಯಕ್ಷ ಎಸ್.ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.