<p><strong>ಬೆಂಗಳೂರು:</strong> ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ ಲ್ಯಾಂಡರ್ನ ಚಿತ್ರವನ್ನು ರೋವರ್ ಪ್ರಜ್ಞಾನ್ ಬುಧವಾರ ಸೆರೆ ಹಿಡಿದಿದೆ. </p><p>ಈ ಚಿತ್ರವನ್ನು ಇಸ್ರೊ ಸಾಮಾಜಿಕ ಜಾಲತಾಣ ‘ಎಕ್ಸ್‘ನಲ್ಲಿ ಹಂಚಿಕೊಂಡಿದೆ. </p><p>ಪ್ರಜ್ಞಾನ್ನಲ್ಲಿ ಅಳವಡಿಸಿರುವ ಕ್ಯಾಮೆರಾದಿಂದ ಈ ಚಿತ್ರವನ್ನು ಸೆರೆಹಿಡಿಯಲಾಗಿದೆ ಎಂದು ಇಸ್ರೊ ಹೇಳಿದೆ. </p>.<p>ದಕ್ಷಿಣ ಧ್ರುವದಲ್ಲಿ ಮೇಲ್ಮೈಯಲ್ಲಿ ಈಗಾಗಲೇ ಆಮ್ಲಜನಕ ಧಾತುವನ್ನು ಪತ್ತೆಹಚ್ಚಲಾಗಿದೆ. ಸದ್ಯ ಈಗ ಜಲಜನಕದ ಹುಡುಕಾಟ ನಡೆದಿದೆ. ಜಲಜನಕ ದೊರೆತರೆ ಚಂದ್ರನ ಮೇಲೆ ನೀರಿನ ಉಪಸ್ಥಿತಿಯು ತಿಳಿಯುತ್ತದೆ ಎಂದು ಇಸ್ರೊ ಹೇಳಿದೆ.</p><p>ಪ್ರಜ್ಞಾನ್ನಲ್ಲಿರುವ ಲಿಬ್ಸ್ (ಲೇಸರ್ ಇಂಡ್ಯೂಸ್ಡ್ ಬ್ರೇಕ್ಡೌನ್ ಸ್ಪೆಕ್ಟ್ರೊಸ್ಕೋಪ್) ಉಪಕರಣವು ನಿರೀಕ್ಷೆಯಂತೆ ಅಲ್ಯುಮಿನಿಯಂ(ಎಎಲ್), ಕ್ಯಾಲ್ಷಿಯಂ,ಕಬ್ಬಿಣ, ಕ್ರೋಮಿಯಂ, ಟೈಟೆನಿಯಂ, ಮ್ಯಾಂಗನೀಸ್, ಸಿಲಿಕಾನ್ ಧಾತುಗಳನ್ನು ಪತ್ತೆ ಮಾಡಿದೆ. ಈ ಲಿಬ್ಸ್ ಉಪಕರಣವನ್ನು ಬೆಂಗಳೂರಿನ ಎಲೆಕ್ಟ್ರೊ– ಆಪ್ಟಿಕ್ಸ್ ಸಿಸ್ಟಮ್ ಪ್ರಯೋಗಾಲಯ ಅಭಿವೃದ್ಧಿಪಡಿಸಿತ್ತು.</p>.<p>ಚಂದ್ರನ ದಕ್ಷಿಣ ಧ್ರುವದಲ್ಲಿ ರೋವರ್ ಇಳಿದು ಬುಧವಾರಕ್ಕೆ ಒಂದು ವಾರ ತುಂಬಲಿದೆ. ಇನ್ನು ಏಳು ದಿನಗಳ ಕಾಲ ಪ್ರಯೋಗ ಮುಂದುವರಿಸಲಿದೆ. ಅಂದರೆ ಸೆ. 5 ರವೇಳೆಗೆ ಚಂದ್ರನಲ್ಲಿ ಕತ್ತಲು ಆವರಿಸಲಿದೆ. ಅಲ್ಲಿ ಇನ್ನು ಬೆಳಕು ಕಾಣಲು ಮುಂದಿನ 14 ದಿನಗಳು ಕಾಯಬೇಕು. ಆ ಬಳಿಕ ಮತ್ತೆ ಲ್ಯಾಂಡರ್ ಮತ್ತು ರೋವರ್ಗಳಿಗೆ ಮರು ಜೀವ ನೀಡಲು ಸಾಧ್ಯವೇ ಎಂಬುದನ್ನು ಇಸ್ರೊ ಪ್ರಯತ್ನ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p><p>ಭಾರತ ಚಂದ್ರನನ್ನು ತಲುಪಿದ ನಾಲ್ಕನೇ ದೇಶ ಮತ್ತು ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ ಲ್ಯಾಂಡರ್ನ ಚಿತ್ರವನ್ನು ರೋವರ್ ಪ್ರಜ್ಞಾನ್ ಬುಧವಾರ ಸೆರೆ ಹಿಡಿದಿದೆ. </p><p>ಈ ಚಿತ್ರವನ್ನು ಇಸ್ರೊ ಸಾಮಾಜಿಕ ಜಾಲತಾಣ ‘ಎಕ್ಸ್‘ನಲ್ಲಿ ಹಂಚಿಕೊಂಡಿದೆ. </p><p>ಪ್ರಜ್ಞಾನ್ನಲ್ಲಿ ಅಳವಡಿಸಿರುವ ಕ್ಯಾಮೆರಾದಿಂದ ಈ ಚಿತ್ರವನ್ನು ಸೆರೆಹಿಡಿಯಲಾಗಿದೆ ಎಂದು ಇಸ್ರೊ ಹೇಳಿದೆ. </p>.<p>ದಕ್ಷಿಣ ಧ್ರುವದಲ್ಲಿ ಮೇಲ್ಮೈಯಲ್ಲಿ ಈಗಾಗಲೇ ಆಮ್ಲಜನಕ ಧಾತುವನ್ನು ಪತ್ತೆಹಚ್ಚಲಾಗಿದೆ. ಸದ್ಯ ಈಗ ಜಲಜನಕದ ಹುಡುಕಾಟ ನಡೆದಿದೆ. ಜಲಜನಕ ದೊರೆತರೆ ಚಂದ್ರನ ಮೇಲೆ ನೀರಿನ ಉಪಸ್ಥಿತಿಯು ತಿಳಿಯುತ್ತದೆ ಎಂದು ಇಸ್ರೊ ಹೇಳಿದೆ.</p><p>ಪ್ರಜ್ಞಾನ್ನಲ್ಲಿರುವ ಲಿಬ್ಸ್ (ಲೇಸರ್ ಇಂಡ್ಯೂಸ್ಡ್ ಬ್ರೇಕ್ಡೌನ್ ಸ್ಪೆಕ್ಟ್ರೊಸ್ಕೋಪ್) ಉಪಕರಣವು ನಿರೀಕ್ಷೆಯಂತೆ ಅಲ್ಯುಮಿನಿಯಂ(ಎಎಲ್), ಕ್ಯಾಲ್ಷಿಯಂ,ಕಬ್ಬಿಣ, ಕ್ರೋಮಿಯಂ, ಟೈಟೆನಿಯಂ, ಮ್ಯಾಂಗನೀಸ್, ಸಿಲಿಕಾನ್ ಧಾತುಗಳನ್ನು ಪತ್ತೆ ಮಾಡಿದೆ. ಈ ಲಿಬ್ಸ್ ಉಪಕರಣವನ್ನು ಬೆಂಗಳೂರಿನ ಎಲೆಕ್ಟ್ರೊ– ಆಪ್ಟಿಕ್ಸ್ ಸಿಸ್ಟಮ್ ಪ್ರಯೋಗಾಲಯ ಅಭಿವೃದ್ಧಿಪಡಿಸಿತ್ತು.</p>.<p>ಚಂದ್ರನ ದಕ್ಷಿಣ ಧ್ರುವದಲ್ಲಿ ರೋವರ್ ಇಳಿದು ಬುಧವಾರಕ್ಕೆ ಒಂದು ವಾರ ತುಂಬಲಿದೆ. ಇನ್ನು ಏಳು ದಿನಗಳ ಕಾಲ ಪ್ರಯೋಗ ಮುಂದುವರಿಸಲಿದೆ. ಅಂದರೆ ಸೆ. 5 ರವೇಳೆಗೆ ಚಂದ್ರನಲ್ಲಿ ಕತ್ತಲು ಆವರಿಸಲಿದೆ. ಅಲ್ಲಿ ಇನ್ನು ಬೆಳಕು ಕಾಣಲು ಮುಂದಿನ 14 ದಿನಗಳು ಕಾಯಬೇಕು. ಆ ಬಳಿಕ ಮತ್ತೆ ಲ್ಯಾಂಡರ್ ಮತ್ತು ರೋವರ್ಗಳಿಗೆ ಮರು ಜೀವ ನೀಡಲು ಸಾಧ್ಯವೇ ಎಂಬುದನ್ನು ಇಸ್ರೊ ಪ್ರಯತ್ನ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p><p>ಭಾರತ ಚಂದ್ರನನ್ನು ತಲುಪಿದ ನಾಲ್ಕನೇ ದೇಶ ಮತ್ತು ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>