ಬೆಂಗಳೂರು: ಚಂದ್ರಯಾನ–2ರ ನೌಕೆಯನ್ನು ಹೊತ್ತು ನಭಕ್ಕೆ ಚಿಮ್ಮಲಿರುವ ರಾಕೆಟ್ ‘ಬಾಹುಬಲಿ’ ಸಮರ್ಥವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ತಿಳಿಸಿದೆ.
ಚಂದ್ರಯಾನ–2 ಮಿಷನ್ನ ಉಡ್ಡಯನ ರಾಕೇಟ್ನಲ್ಲಿನ ತಾಂತ್ರಿಕ ದೋಷವನ್ನು ಪರೀಕ್ಷಿಸಿ, ಸರಿಪಡಿಸಲಾಗಿದ್ದು, ಅದರ ಕಾರ್ಯಕ್ಷಮತೆ ಸಮರ್ಥವಾಗಿದೆ. ಉಡ್ಡಯನಕ್ಕೆ ಪೂರ್ವ ತಯಾರಿ ಪೂರ್ಣಗೊಂಡಿದೆ ಎಂದು ಇಸ್ರೊ ಟ್ವೀಟ್ ಮಾಡಿದೆ.
ಈ ಮುನ್ನ ಜುಲೈ 15ರಂದು ನೌಕೆ ಉಡ್ಡಯನಕ್ಕೆ ಯೋಜಿಸಲಾಗಿತ್ತು. ಆದರೆ ಉಡ್ಡಯನಕ್ಕೆ 56 ನಿಮಿಷಗಳು ಬಾಕಿ ಇರುವಾಗ ರಾಕೆಟ್ನಲ್ಲಿ ತಾಂತ್ರಿಕ ದೋಷ ಕಂಡುಬಂದದ್ದರಿಂದ ರದ್ದುಪಡಿಸಲಾಗಿತ್ತು. ಇದಾದ ಮೂರು ದಿನಗಳ ಬಳಿಕ ಹೊಸ ದಿನಾಂಕವನ್ನು ಇಸ್ರೊ ಪ್ರಕಟಿಸಿತ್ತು.