<p><strong>ಬೆಂಗಳೂರು</strong>: ‘ಆಧುನಿಕ ತಂತ್ರಜ್ಞಾನವು ಸಮಾಜದ ಒಳಿತಿಗಾಗಿ ಏನೆಲ್ಲ ಕೊಡುಗೆ ನೀಡಬಹುದು ಎನ್ನುವುದನ್ನು ಕೋವಿಡ್<br />ಬಿಕ್ಕಟ್ಟು ತೋರಿಸಿಕೊಟ್ಟಿದೆ. ಇದರೊಂದಿಗೆ ವಿಕೋಪ ಪರಿಹಾರ, ಮಾಲಿನ್ಯ ನಿಯಂತ್ರಣ, ನೀರಿನ ನಿರ್ವಹಣೆ ಸೇರಿ<br />ವಿವಿಧ ಕ್ಷೇತ್ರಗಳಲ್ಲಿ ಆಧುನಿಕ ತಂತ್ರಜ್ಞಾನ ಸರ್ವರ ಒಳಿತಿಗೆ ಬಳಕೆಯಾಗುವಂತೆ ನೋಡಿಕೊಳ್ಳಬೇಕಾಗಿದೆ’ ಎಂದು ಮೆಕೆನ್ಸಿ<br />ಕಂಪನಿಯ ಹಿರಿಯ ಪಾಲುದಾರ ನೋಶಿರ್ ಕಾಕಾ ಹೇಳಿದರು.</p>.<p>ಮೇಳದಲ್ಲಿ ‘ಸಾರ್ವಜನಿಕರ ಒಳಿತಿಗಾಗಿ ತಂತ್ರಜ್ಞಾನ’ ಕುರಿತ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಂತ್ರಜ್ಞಾನದ ಬಳಕೆ ಹೆಚ್ಚಿದಂತೆ ಅಗತ್ಯ ಕೌಶಲಗಳಿರುವ ಪರಿಣತರ ಕೊರತೆ ಜಗತ್ತಿನಾದ್ಯಂತ ಕಾಣಿಸಿಕೊಳ್ಳಲಿದ್ದು, ಈ ಕೊರತೆ ತುಂಬಿಕೊಡುವಲ್ಲಿ ಭಾರತ ಮಹತ್ವದ ಪಾತ್ರ ವಹಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕೌಶಲ ಹಾಗೂ ದತ್ತಾಂಶದ ದೃಷ್ಟಿಯಿಂದ ಭಾರತವು ಜಗತ್ತಿನಲ್ಲೇ ಪ್ರಭಾವಶಾಲಿ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುತ್ತದೆ. ಅರ್ಥವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ಯಮಗಳಿಗೂ ತಂತ್ರಜ್ಞಾನದ ಅನುಕೂಲಗಳು ಸಿಗಬೇಕಿದೆ’ ಎಂದು ಅವರು ಶ್ಲಾಘಿಸಿದರು.</p>.<p>‘2025ರ ವೇಳೆಗೆ ಭಾರತದ ನಿರೀಕ್ಷಿತ ಜಿಡಿಪಿ ಹೆಚ್ಚಳದಲ್ಲಿ ತಂತ್ರಜ್ಞಾನದ ಕೊಡುಗೆ ಶೇ 10ಕ್ಕಿಂತ ಹೆಚ್ಚಿರಲಿದೆ. ಚಿಲ್ಲರೆ ವಹಿವಾಟು, ಕೃಷಿ, ಬ್ಯಾಂಕಿಂಗ್, ಆರೋಗ್ಯ ರಕ್ಷಣೆ, ದೂರಸಂಪರ್ಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬೆಳವಣಿಗೆಯಲ್ಲೂ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸಲಿದೆ’ ಎಂದರು.</p>.<p>ಸೋಷಿಯಲ್ ಆಲ್ಫಾ ಸಂಸ್ಥೆಯ ಮನೋಜ್ ಕುಮಾರ್, ‘ಭಾರತದಲ್ಲಿ ಬೆಳೆಯುತ್ತಿರುವ ನವೋದ್ಯಮ ವ್ಯವಸ್ಥೆಯು ಸಾಮಾಜಿಕ ಒಳಿತಿಗಾಗಿಯೂ ಕೆಲಸ ಮಾಡುತ್ತಿದೆ. ಸರ್ಕಾರ ಹಾಗೂ ಸಮಾಜ ಸೇವಾ ಸಂಸ್ಥೆಗಳೊಂದಿಗೆ ನವೋದ್ಯಮಗಳ ಸಹಭಾಗಿ<br />ತ್ವವು ನಮ್ಮ ದೇಶಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ಹಲವು ಪರಿಹಾರಗಳನ್ನು ಒದಗಿಸಬಹುದು‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆಧುನಿಕ ತಂತ್ರಜ್ಞಾನವು ಸಮಾಜದ ಒಳಿತಿಗಾಗಿ ಏನೆಲ್ಲ ಕೊಡುಗೆ ನೀಡಬಹುದು ಎನ್ನುವುದನ್ನು ಕೋವಿಡ್<br />ಬಿಕ್ಕಟ್ಟು ತೋರಿಸಿಕೊಟ್ಟಿದೆ. ಇದರೊಂದಿಗೆ ವಿಕೋಪ ಪರಿಹಾರ, ಮಾಲಿನ್ಯ ನಿಯಂತ್ರಣ, ನೀರಿನ ನಿರ್ವಹಣೆ ಸೇರಿ<br />ವಿವಿಧ ಕ್ಷೇತ್ರಗಳಲ್ಲಿ ಆಧುನಿಕ ತಂತ್ರಜ್ಞಾನ ಸರ್ವರ ಒಳಿತಿಗೆ ಬಳಕೆಯಾಗುವಂತೆ ನೋಡಿಕೊಳ್ಳಬೇಕಾಗಿದೆ’ ಎಂದು ಮೆಕೆನ್ಸಿ<br />ಕಂಪನಿಯ ಹಿರಿಯ ಪಾಲುದಾರ ನೋಶಿರ್ ಕಾಕಾ ಹೇಳಿದರು.</p>.<p>ಮೇಳದಲ್ಲಿ ‘ಸಾರ್ವಜನಿಕರ ಒಳಿತಿಗಾಗಿ ತಂತ್ರಜ್ಞಾನ’ ಕುರಿತ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಂತ್ರಜ್ಞಾನದ ಬಳಕೆ ಹೆಚ್ಚಿದಂತೆ ಅಗತ್ಯ ಕೌಶಲಗಳಿರುವ ಪರಿಣತರ ಕೊರತೆ ಜಗತ್ತಿನಾದ್ಯಂತ ಕಾಣಿಸಿಕೊಳ್ಳಲಿದ್ದು, ಈ ಕೊರತೆ ತುಂಬಿಕೊಡುವಲ್ಲಿ ಭಾರತ ಮಹತ್ವದ ಪಾತ್ರ ವಹಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕೌಶಲ ಹಾಗೂ ದತ್ತಾಂಶದ ದೃಷ್ಟಿಯಿಂದ ಭಾರತವು ಜಗತ್ತಿನಲ್ಲೇ ಪ್ರಭಾವಶಾಲಿ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುತ್ತದೆ. ಅರ್ಥವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ಯಮಗಳಿಗೂ ತಂತ್ರಜ್ಞಾನದ ಅನುಕೂಲಗಳು ಸಿಗಬೇಕಿದೆ’ ಎಂದು ಅವರು ಶ್ಲಾಘಿಸಿದರು.</p>.<p>‘2025ರ ವೇಳೆಗೆ ಭಾರತದ ನಿರೀಕ್ಷಿತ ಜಿಡಿಪಿ ಹೆಚ್ಚಳದಲ್ಲಿ ತಂತ್ರಜ್ಞಾನದ ಕೊಡುಗೆ ಶೇ 10ಕ್ಕಿಂತ ಹೆಚ್ಚಿರಲಿದೆ. ಚಿಲ್ಲರೆ ವಹಿವಾಟು, ಕೃಷಿ, ಬ್ಯಾಂಕಿಂಗ್, ಆರೋಗ್ಯ ರಕ್ಷಣೆ, ದೂರಸಂಪರ್ಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬೆಳವಣಿಗೆಯಲ್ಲೂ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸಲಿದೆ’ ಎಂದರು.</p>.<p>ಸೋಷಿಯಲ್ ಆಲ್ಫಾ ಸಂಸ್ಥೆಯ ಮನೋಜ್ ಕುಮಾರ್, ‘ಭಾರತದಲ್ಲಿ ಬೆಳೆಯುತ್ತಿರುವ ನವೋದ್ಯಮ ವ್ಯವಸ್ಥೆಯು ಸಾಮಾಜಿಕ ಒಳಿತಿಗಾಗಿಯೂ ಕೆಲಸ ಮಾಡುತ್ತಿದೆ. ಸರ್ಕಾರ ಹಾಗೂ ಸಮಾಜ ಸೇವಾ ಸಂಸ್ಥೆಗಳೊಂದಿಗೆ ನವೋದ್ಯಮಗಳ ಸಹಭಾಗಿ<br />ತ್ವವು ನಮ್ಮ ದೇಶಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ಹಲವು ಪರಿಹಾರಗಳನ್ನು ಒದಗಿಸಬಹುದು‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>