<p><strong>ಹುಬ್ಬಳ್ಳಿ: </strong>ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆರಂಭಿಸಲಾಗುತ್ತಿರುವ ‘ಪಿ–ಬ್ಯಾಂಡ್’ ರಾಡರ್ ಕೇಂದ್ರ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ವರದಾನವಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿಯೇ ಮೊದಲ ಕೇಂದ್ರ ಇದಾಗಿದೆ.</p>.<p>ಇಸ್ರೊ ನೆರವಿನೊಂದಿಗೆ ಆರಂಭಿಸಲಾಗುತ್ತಿರುವ ಈ ಕೇಂದ್ರವು ಗುಡುಗು, ಸಿಡಿಲು, ಮಳೆ, ಬಿರುಗಾಳಿ, ನೆರೆ ಸೇರಿದಂತೆ ಹವಾಮಾನ ವೈಪರೀತ್ಯಗಳ ಬಗ್ಗೆ ನಿಖರ ಮಾಹಿತಿ ಮತ್ತು ಮುನ್ಸೂಚನೆಯನ್ನು ಕನಿಷ್ಠ ಮೂರು ಗಂಟೆಗಳ ಮೊದಲೇ ನೀಡಲಿದೆ.</p>.<p>₹ 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಕೇಂದ್ರವು ಹವಾಮಾನದಲ್ಲಾಗುವ ಏರುಪೇರುಗಳ ಬಗ್ಗೆ ಖಚಿತ ಮಾಹಿತಿಯನ್ನು ಕ್ಷಣ, ಕ್ಷಣಕ್ಕೆ ಸರ್ಕಾರದ ವಿವಿಧ ಇಲಾಖೆಗಳಿಗೆ ಮತ್ತು ವಿವಿಧ ಮಾಧ್ಯಮಗಳ ಮೂಲಕ ರೈತರಿಗೆ, ಮೀನುಗಾರರಿಗೆ, ಕುರಿಗಾಹಿಗಳಿಗೆ ರವಾನಿಸುತ್ತದೆ.</p>.<p>508 ಕಿ.ಮೀ. ವ್ಯಾಪ್ತಿಯಲ್ಲಾಗುವ ಹವಾಮಾನ ವೈಪರೀತ್ಯಗಳ ಖಚಿತ ಮಾಹಿತಿಯನ್ನು ಈ ರಾಡರ್ ಚಿತ್ರ ಸಹಿತ ಸೆರೆ ಹಿಡಿಯಲಿದೆ. ಯಾವ ದಿಕ್ಕಿನಲ್ಲಿ, ಯಾವ ಸ್ಥಳದಲ್ಲಿ ಗುಡುಗು, ಸಿಡಿಲು, ಮಳೆಯಾಗಬಹುದು. ಇದರಿಂದ ಯಾವ ಪ್ರಮಾಣದ ಹಾನಿಯಾಗಬಹುದು ಎಂಬ ಬಗ್ಗೆ ಮುನ್ನೆಚ್ಚರಿಕೆ ನೀಡುತ್ತದೆ.</p>.<p>ರಾಡರ್ ನೀಡುವ ಮಾಹಿತಿಯನ್ನು ಕೇಂದ್ರದ ವಿಜ್ಞಾನಿಗಳು, ತಜ್ಞರು ವಿಶ್ಲೇಷಿಸಿ ಆಯಾ ಜಿಲ್ಲೆಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಿದ್ದಾರೆ. ಇದರಿಂದ ತಕ್ಷಣಕ್ಕೆ ಮುನ್ನೆಚ್ಚರಿಕೆ ಕೈಗೊಳ್ಳಲು ಅನುಕೂಲವಾಗುತ್ತದೆ.</p>.<p>ಮಳೆಯಿಂದಾಗುವ ಅನಾಹುತ ಮಾಹಿತಿ ಆಧರಿಸಿ ಜನರು, ಕೃಷಿಕರು, ಕುರಿಗಾಹಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ, ಜೀವಹಾನಿ ತಪ್ಪಿಸಬಹುದಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉತ್ತರ ಕರ್ನಾಟಕ ಹವಾಮಾನ ಮತ್ತು ಸಂಶೋಧನಾ ಕೇಂದ್ರದ ಉಸ್ತುವಾರಿ ಅಧಿಕಾರಿ ಡಾ.ರಾಜು ರೋಕಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕೇಂದ್ರಕ್ಕೆ ಚಾಲನೆ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಆರಂಭವಾಗುತ್ತಿರುವ ‘ಪಿ–ಬ್ಯಾಂಡ್’ ರಾಡರ್ ಕೇಂದ್ರ ನಿರ್ಮಾಣ ಕಾರ್ಯಕ್ಕೆ ಕೇಂದ್ರ ಸಚಿವ ಡಾ.ಹರ್ಷವರ್ಧನ್ ಫೆ.14ರಂದು ಚಾಲನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆರಂಭಿಸಲಾಗುತ್ತಿರುವ ‘ಪಿ–ಬ್ಯಾಂಡ್’ ರಾಡರ್ ಕೇಂದ್ರ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ವರದಾನವಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿಯೇ ಮೊದಲ ಕೇಂದ್ರ ಇದಾಗಿದೆ.</p>.<p>ಇಸ್ರೊ ನೆರವಿನೊಂದಿಗೆ ಆರಂಭಿಸಲಾಗುತ್ತಿರುವ ಈ ಕೇಂದ್ರವು ಗುಡುಗು, ಸಿಡಿಲು, ಮಳೆ, ಬಿರುಗಾಳಿ, ನೆರೆ ಸೇರಿದಂತೆ ಹವಾಮಾನ ವೈಪರೀತ್ಯಗಳ ಬಗ್ಗೆ ನಿಖರ ಮಾಹಿತಿ ಮತ್ತು ಮುನ್ಸೂಚನೆಯನ್ನು ಕನಿಷ್ಠ ಮೂರು ಗಂಟೆಗಳ ಮೊದಲೇ ನೀಡಲಿದೆ.</p>.<p>₹ 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಕೇಂದ್ರವು ಹವಾಮಾನದಲ್ಲಾಗುವ ಏರುಪೇರುಗಳ ಬಗ್ಗೆ ಖಚಿತ ಮಾಹಿತಿಯನ್ನು ಕ್ಷಣ, ಕ್ಷಣಕ್ಕೆ ಸರ್ಕಾರದ ವಿವಿಧ ಇಲಾಖೆಗಳಿಗೆ ಮತ್ತು ವಿವಿಧ ಮಾಧ್ಯಮಗಳ ಮೂಲಕ ರೈತರಿಗೆ, ಮೀನುಗಾರರಿಗೆ, ಕುರಿಗಾಹಿಗಳಿಗೆ ರವಾನಿಸುತ್ತದೆ.</p>.<p>508 ಕಿ.ಮೀ. ವ್ಯಾಪ್ತಿಯಲ್ಲಾಗುವ ಹವಾಮಾನ ವೈಪರೀತ್ಯಗಳ ಖಚಿತ ಮಾಹಿತಿಯನ್ನು ಈ ರಾಡರ್ ಚಿತ್ರ ಸಹಿತ ಸೆರೆ ಹಿಡಿಯಲಿದೆ. ಯಾವ ದಿಕ್ಕಿನಲ್ಲಿ, ಯಾವ ಸ್ಥಳದಲ್ಲಿ ಗುಡುಗು, ಸಿಡಿಲು, ಮಳೆಯಾಗಬಹುದು. ಇದರಿಂದ ಯಾವ ಪ್ರಮಾಣದ ಹಾನಿಯಾಗಬಹುದು ಎಂಬ ಬಗ್ಗೆ ಮುನ್ನೆಚ್ಚರಿಕೆ ನೀಡುತ್ತದೆ.</p>.<p>ರಾಡರ್ ನೀಡುವ ಮಾಹಿತಿಯನ್ನು ಕೇಂದ್ರದ ವಿಜ್ಞಾನಿಗಳು, ತಜ್ಞರು ವಿಶ್ಲೇಷಿಸಿ ಆಯಾ ಜಿಲ್ಲೆಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಿದ್ದಾರೆ. ಇದರಿಂದ ತಕ್ಷಣಕ್ಕೆ ಮುನ್ನೆಚ್ಚರಿಕೆ ಕೈಗೊಳ್ಳಲು ಅನುಕೂಲವಾಗುತ್ತದೆ.</p>.<p>ಮಳೆಯಿಂದಾಗುವ ಅನಾಹುತ ಮಾಹಿತಿ ಆಧರಿಸಿ ಜನರು, ಕೃಷಿಕರು, ಕುರಿಗಾಹಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ, ಜೀವಹಾನಿ ತಪ್ಪಿಸಬಹುದಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉತ್ತರ ಕರ್ನಾಟಕ ಹವಾಮಾನ ಮತ್ತು ಸಂಶೋಧನಾ ಕೇಂದ್ರದ ಉಸ್ತುವಾರಿ ಅಧಿಕಾರಿ ಡಾ.ರಾಜು ರೋಕಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕೇಂದ್ರಕ್ಕೆ ಚಾಲನೆ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಆರಂಭವಾಗುತ್ತಿರುವ ‘ಪಿ–ಬ್ಯಾಂಡ್’ ರಾಡರ್ ಕೇಂದ್ರ ನಿರ್ಮಾಣ ಕಾರ್ಯಕ್ಕೆ ಕೇಂದ್ರ ಸಚಿವ ಡಾ.ಹರ್ಷವರ್ಧನ್ ಫೆ.14ರಂದು ಚಾಲನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>