<p><strong>ಚೆನ್ನೈ: </strong>ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ವಿರಾಟ್ ಕೊಹ್ಲಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.</p>.<p>ಘಟನೆ ಬೆನ್ನಲ್ಲೇ ರೋಹಿತ್ ಶರ್ಮಾ ಬೆಂಬಲಿಗರು ಟ್ವಿಟರ್ನಲ್ಲಿ ವಿರಾಟ್ ಕೊಹ್ಲಿ ವಿರುದ್ಧ ಮುಗಿಬಿದ್ದಿದ್ದಾರೆ.</p>.<p><strong>#ArrestKohli</strong> ಹ್ಯಾಶ್ಟ್ಯಾಗ್ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದ್ದು, ರೋಹಿತ್ ಅಭಿಮಾನಿಗಳು ಸಾಥ್ ನೀಡಿದ್ದಾರೆ.</p>.<p><strong>ಓದಿ...<a href="https://www.prajavani.net/sports/cricket/tamil-nadu-virat-kohli-fan-murders-friend-for-talking-ill-of-rcb-980393.html" target="_blank">RCB ಬಗ್ಗೆ ಕೆಟ್ಟದಾಗಿ ಮಾತನಾಡಿದ ರೋಹಿತ್ ಅಭಿಮಾನಿಯನ್ನು ಕೊಂದ ಕೊಹ್ಲಿ ಫ್ಯಾನ್</a></strong></p>.<p>ಕೊಲೆ ಮಾಡಿರುವ ಯುವಕ ವಿರಾಟ್ ಕೊಹ್ಲಿ ಅಭಿಮಾನಿಯಾದರೆ, ಸಾವಿಗೀಡಾದವ ರೋಹಿತ್ ಶರ್ಮಾ ಅಭಿಮಾನಿ.</p>.<p>ಮೃತ ಯುವಕನನ್ನು ಪಿ. ವಿಘ್ನೇಶ್ (24) ಎಂದು ಗುರುತಿಸಲಾಗಿದೆ. ಕೊಲೆ ಆರೋಪದ ಮೇಲೆ 21 ವರ್ಷದ ಎಸ್.ಧರ್ಮರಾಜ್ ಎಂಬ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಿಘ್ನೇಶ್ ಸಾವು ಪ್ರಕರಣ ಇದೀಗ ರೋಹಿತ್ –ಕೊಹ್ಲಿ ಅಭಿಮಾನಿಗಳ ನಡುವೆ ಜಟಾಪಟಿಗೆ ಕಾರಣವಾಗಿದೆ.</p>.<p>‘ವಿಘ್ನೇಶ್ ಅವರು ರೋಹಿತ್ ಶರ್ಮಾ ಅವರ ಅಭಿಮಾನಿಯಾಗಿದ್ದರು ಎಂಬ ಕಾರಣಕ್ಕೆ ಎಲ್ಲರೂ ಸುಮ್ಮನಿದ್ದಾರೆ. ಪ್ರಧಾನಿ ಮೋದಿಯವರೇ, ಕೊಹ್ಲಿ ಅವರನ್ನು ಬಂಧಿಸಿ, ನಮಗೆ ನ್ಯಾಯ ಕೊಡಿಸಿ’ ಎಂದು ಹರ್ಷಿತ್ ಎಂಬುವರು ಟ್ವೀಟ್ ಮಾಡಿದ್ದಾರೆ.</p>.<p>‘ಇಂತಹ ಅಮಾನವೀಯ ಘಟನೆಯಿಂದಾಗಿ ಕೊಹ್ಲಿ ಅಭಿಮಾನಿಗಳಿಗೆ ನಾಚಿಕೆಯಾಗಿಲ್ಲ. ಅಭಿಮಾನಿಗಳು ಕೂಡ ಕೊಹ್ಲಿಯೊಂದಿಗೆ ಜೈಲಿಗೆ ಹೋಗಲು ಅರ್ಹರಾಗಿದ್ದಾರೆ’ ಎಂದು ಆಶಿಮ್ ಟ್ವೀಟ್ ಮಾಡಿದ್ದಾರೆ.</p>.<p>ಇದು ವಿರಾಟ್ ಕೊಹ್ಲಿಯವರಿಂದ ಆಗಿರುವ ತಪ್ಪಲ್ಲ ಎಂದು ಹೇಳುವ ಮೂಲಕ ಕೊಹ್ಲಿ ಅಭಿಮಾನಿಗಳು ರೋಹಿತ್ ಅಭಿಮಾನಿಗಳಿಗೆ ತಿರುಗೇಟು ನೀಡಿದ್ದಾರೆ.</p>.<p>ರೋಹಿತ್ ಅಭಿಮಾನಿಗಳೆಲ್ಲರೂ ನಾಚಿಕೆಯಿಲ್ಲದವರು. ನೀವು #ArrestKohli ಹ್ಯಾಶ್ಟ್ಯಾಗ್ ಅನ್ನು ಏಕೆ ಟ್ರೆಂಡ್ ಮಾಡುತ್ತಿದ್ದೀರಿ? ಇದು ಕೊಹ್ಲಿ ಅವರಿಂದಾದ ಅಪರಾಧವಲ್ಲ. ನಿಯಮಗಳನ್ನು ಅರಿತುಕೊಳ್ಳಿ ಎಂದು ಹರ್ಷಿಲ್ ವಾಸವ ಟ್ವೀಟ್ ಮಾಡಿದ್ದಾರೆ.</p>.<p>ಏನಿದು ಘಟನೆ: ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರಾದ ವಿಘ್ನೇಶ್ ಮತ್ತು ಧರ್ಮರಾಜ್ ಅಪ್ಪಟ ಕ್ರಿಕೆಟ್ ಅಭಿಮಾನಿಗಳಾಗಿದ್ದರು. ಐಟಿಐ ಮುಗಿಸಿದ್ದ ವಿಘ್ನೇಶ್ ಸಿಂಗಪುರಕ್ಕೆ ತೆರಳಲು ಉದ್ಯೋಗ ವೀಸಾಗಾಗಿ ಕಾಯುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.</p>.<p>ವಿಘ್ನೇಶ್ ಮತ್ತು ಧರ್ಮರಾಜ್ ಮಂಗಳವಾರ ರಾತ್ರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಮದ್ಯ ಸೇವಿಸಿ, ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಇಬ್ಬರಲ್ಲಿ ಯಾರು ಉತ್ತಮ ಆಟಗಾರ ಎಂಬುದರ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಗಲಾಟೆ ಮಾಡಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಆರ್ಸಿಬಿ ಮತ್ತು ವಿರಾಟ್ ಕೊಹ್ಲಿ ಬಗ್ಗೆ ವಿಘ್ನೇಶ್ ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಧರ್ಮರಾಜ್, ವಿಘ್ನೇಶ್ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಜತೆಗೆ ಬ್ಯಾಟ್ನಿಂದ ತಲೆಗೆ ಹೊಡೆದಿದ್ದಾನೆ. ಘಟನೆ ಬಳಿಕ ಧರ್ಮರಾಜ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ವಿರಾಟ್ ಕೊಹ್ಲಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.</p>.<p>ಘಟನೆ ಬೆನ್ನಲ್ಲೇ ರೋಹಿತ್ ಶರ್ಮಾ ಬೆಂಬಲಿಗರು ಟ್ವಿಟರ್ನಲ್ಲಿ ವಿರಾಟ್ ಕೊಹ್ಲಿ ವಿರುದ್ಧ ಮುಗಿಬಿದ್ದಿದ್ದಾರೆ.</p>.<p><strong>#ArrestKohli</strong> ಹ್ಯಾಶ್ಟ್ಯಾಗ್ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದ್ದು, ರೋಹಿತ್ ಅಭಿಮಾನಿಗಳು ಸಾಥ್ ನೀಡಿದ್ದಾರೆ.</p>.<p><strong>ಓದಿ...<a href="https://www.prajavani.net/sports/cricket/tamil-nadu-virat-kohli-fan-murders-friend-for-talking-ill-of-rcb-980393.html" target="_blank">RCB ಬಗ್ಗೆ ಕೆಟ್ಟದಾಗಿ ಮಾತನಾಡಿದ ರೋಹಿತ್ ಅಭಿಮಾನಿಯನ್ನು ಕೊಂದ ಕೊಹ್ಲಿ ಫ್ಯಾನ್</a></strong></p>.<p>ಕೊಲೆ ಮಾಡಿರುವ ಯುವಕ ವಿರಾಟ್ ಕೊಹ್ಲಿ ಅಭಿಮಾನಿಯಾದರೆ, ಸಾವಿಗೀಡಾದವ ರೋಹಿತ್ ಶರ್ಮಾ ಅಭಿಮಾನಿ.</p>.<p>ಮೃತ ಯುವಕನನ್ನು ಪಿ. ವಿಘ್ನೇಶ್ (24) ಎಂದು ಗುರುತಿಸಲಾಗಿದೆ. ಕೊಲೆ ಆರೋಪದ ಮೇಲೆ 21 ವರ್ಷದ ಎಸ್.ಧರ್ಮರಾಜ್ ಎಂಬ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಿಘ್ನೇಶ್ ಸಾವು ಪ್ರಕರಣ ಇದೀಗ ರೋಹಿತ್ –ಕೊಹ್ಲಿ ಅಭಿಮಾನಿಗಳ ನಡುವೆ ಜಟಾಪಟಿಗೆ ಕಾರಣವಾಗಿದೆ.</p>.<p>‘ವಿಘ್ನೇಶ್ ಅವರು ರೋಹಿತ್ ಶರ್ಮಾ ಅವರ ಅಭಿಮಾನಿಯಾಗಿದ್ದರು ಎಂಬ ಕಾರಣಕ್ಕೆ ಎಲ್ಲರೂ ಸುಮ್ಮನಿದ್ದಾರೆ. ಪ್ರಧಾನಿ ಮೋದಿಯವರೇ, ಕೊಹ್ಲಿ ಅವರನ್ನು ಬಂಧಿಸಿ, ನಮಗೆ ನ್ಯಾಯ ಕೊಡಿಸಿ’ ಎಂದು ಹರ್ಷಿತ್ ಎಂಬುವರು ಟ್ವೀಟ್ ಮಾಡಿದ್ದಾರೆ.</p>.<p>‘ಇಂತಹ ಅಮಾನವೀಯ ಘಟನೆಯಿಂದಾಗಿ ಕೊಹ್ಲಿ ಅಭಿಮಾನಿಗಳಿಗೆ ನಾಚಿಕೆಯಾಗಿಲ್ಲ. ಅಭಿಮಾನಿಗಳು ಕೂಡ ಕೊಹ್ಲಿಯೊಂದಿಗೆ ಜೈಲಿಗೆ ಹೋಗಲು ಅರ್ಹರಾಗಿದ್ದಾರೆ’ ಎಂದು ಆಶಿಮ್ ಟ್ವೀಟ್ ಮಾಡಿದ್ದಾರೆ.</p>.<p>ಇದು ವಿರಾಟ್ ಕೊಹ್ಲಿಯವರಿಂದ ಆಗಿರುವ ತಪ್ಪಲ್ಲ ಎಂದು ಹೇಳುವ ಮೂಲಕ ಕೊಹ್ಲಿ ಅಭಿಮಾನಿಗಳು ರೋಹಿತ್ ಅಭಿಮಾನಿಗಳಿಗೆ ತಿರುಗೇಟು ನೀಡಿದ್ದಾರೆ.</p>.<p>ರೋಹಿತ್ ಅಭಿಮಾನಿಗಳೆಲ್ಲರೂ ನಾಚಿಕೆಯಿಲ್ಲದವರು. ನೀವು #ArrestKohli ಹ್ಯಾಶ್ಟ್ಯಾಗ್ ಅನ್ನು ಏಕೆ ಟ್ರೆಂಡ್ ಮಾಡುತ್ತಿದ್ದೀರಿ? ಇದು ಕೊಹ್ಲಿ ಅವರಿಂದಾದ ಅಪರಾಧವಲ್ಲ. ನಿಯಮಗಳನ್ನು ಅರಿತುಕೊಳ್ಳಿ ಎಂದು ಹರ್ಷಿಲ್ ವಾಸವ ಟ್ವೀಟ್ ಮಾಡಿದ್ದಾರೆ.</p>.<p>ಏನಿದು ಘಟನೆ: ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರಾದ ವಿಘ್ನೇಶ್ ಮತ್ತು ಧರ್ಮರಾಜ್ ಅಪ್ಪಟ ಕ್ರಿಕೆಟ್ ಅಭಿಮಾನಿಗಳಾಗಿದ್ದರು. ಐಟಿಐ ಮುಗಿಸಿದ್ದ ವಿಘ್ನೇಶ್ ಸಿಂಗಪುರಕ್ಕೆ ತೆರಳಲು ಉದ್ಯೋಗ ವೀಸಾಗಾಗಿ ಕಾಯುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.</p>.<p>ವಿಘ್ನೇಶ್ ಮತ್ತು ಧರ್ಮರಾಜ್ ಮಂಗಳವಾರ ರಾತ್ರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಮದ್ಯ ಸೇವಿಸಿ, ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಇಬ್ಬರಲ್ಲಿ ಯಾರು ಉತ್ತಮ ಆಟಗಾರ ಎಂಬುದರ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಗಲಾಟೆ ಮಾಡಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಆರ್ಸಿಬಿ ಮತ್ತು ವಿರಾಟ್ ಕೊಹ್ಲಿ ಬಗ್ಗೆ ವಿಘ್ನೇಶ್ ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಧರ್ಮರಾಜ್, ವಿಘ್ನೇಶ್ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಜತೆಗೆ ಬ್ಯಾಟ್ನಿಂದ ತಲೆಗೆ ಹೊಡೆದಿದ್ದಾನೆ. ಘಟನೆ ಬಳಿಕ ಧರ್ಮರಾಜ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>