ಈಶಾನ್ಯ ದೆಹಲಿಯಲ್ಲಿ ಕಳೆದ ತಿಂಗಳು ಗಲಭೆ ತೀವ್ರಗೊಂಡ ಸಂದರ್ಭದಲ್ಲಿ, ವದಂತಿ ಮತ್ತು ದ್ವೇಷ ಭಾಷಣವನ್ನು ತಡೆಯುವುದ
ಕ್ಕಾಗಿ ಈ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಈಗಾಗಲೇ 14 ದೂರುದಾರರು ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಹಂಚಿಕೊಂಡ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬರ ಹೇಳಿಕೆ ದಾಖಲಿಸಿಕೊಂಡಿದೆ.