<p><strong>ನವದೆಹಲಿ:</strong> ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಪ್ರಕಟಿಸಿದವರು ಯಾರು ಎಂಬುದನ್ನು ಪತ್ತೆ ಮಾಡಲು ವಾಟ್ಸ್ಆ್ಯಪ್, ಫೇಸ್ಬುಕ್ ಮತ್ತು ಟ್ವಿಟರ್ ಅನ್ನು ಕೋರಲಾಗುವುದು ಎಂದು ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದ ಸಮಿತಿಯು ನಿರ್ಧರಿಸಿದೆ.</p>.<p>ಈಶಾನ್ಯ ದೆಹಲಿಯಲ್ಲಿ ಕಳೆದ ತಿಂಗಳು ಗಲಭೆ ತೀವ್ರಗೊಂಡ ಸಂದರ್ಭದಲ್ಲಿ, ವದಂತಿ ಮತ್ತು ದ್ವೇಷ ಭಾಷಣವನ್ನು ತಡೆಯುವುದ<br />ಕ್ಕಾಗಿ ಈ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಈಗಾಗಲೇ 14 ದೂರುದಾರರು ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಹಂಚಿಕೊಂಡ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬರ ಹೇಳಿಕೆ ದಾಖಲಿಸಿಕೊಂಡಿದೆ.</p>.<p>ಪ್ರಚೋದನಕಾರಿ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಬಾರದು ಎಂಬ ಕಾನೂನು ಇರುವುದು ತಮಗೆ ತಿಳಿದಿರಲಿಲ್ಲ ಎಂದು ಆರೋಪಿಯು ಹೇಳಿದ್ದಾರೆ. ಅವರು ಕ್ಷಮೆಯನ್ನೂ ಕೋರಿದ್ದಾರೆ ಎಂದು ಸಮಿತಿಯು ತಿಳಿಸಿದೆ.</p>.<p>‘ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿರುವ ಪ್ರಚೋದನಕಾರಿ ಹೇಳಿಕೆಗಳನ್ನು ಅಳಿಸುವುದಾಗಿ ಮತ್ತು ಕ್ಷಮಾಪಣೆಯ ಹೇಳಿಕೆಯನ್ನು ಪ್ರಕಟಿಸುವುದಾಗಿ ಆರೋಪಿಯು ಭರವಸೆ ನೀಡಿದ್ದಾರೆ’ ಎಂದು ಸಮಿತಿಯ ಅಧ್ಯಕ್ಷ ಶಾಸಕ ರಾಘವ ಚಡ್ಡಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಪ್ರಕಟಿಸಿದವರು ಯಾರು ಎಂಬುದನ್ನು ಪತ್ತೆ ಮಾಡಲು ವಾಟ್ಸ್ಆ್ಯಪ್, ಫೇಸ್ಬುಕ್ ಮತ್ತು ಟ್ವಿಟರ್ ಅನ್ನು ಕೋರಲಾಗುವುದು ಎಂದು ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದ ಸಮಿತಿಯು ನಿರ್ಧರಿಸಿದೆ.</p>.<p>ಈಶಾನ್ಯ ದೆಹಲಿಯಲ್ಲಿ ಕಳೆದ ತಿಂಗಳು ಗಲಭೆ ತೀವ್ರಗೊಂಡ ಸಂದರ್ಭದಲ್ಲಿ, ವದಂತಿ ಮತ್ತು ದ್ವೇಷ ಭಾಷಣವನ್ನು ತಡೆಯುವುದ<br />ಕ್ಕಾಗಿ ಈ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಈಗಾಗಲೇ 14 ದೂರುದಾರರು ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಹಂಚಿಕೊಂಡ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬರ ಹೇಳಿಕೆ ದಾಖಲಿಸಿಕೊಂಡಿದೆ.</p>.<p>ಪ್ರಚೋದನಕಾರಿ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಬಾರದು ಎಂಬ ಕಾನೂನು ಇರುವುದು ತಮಗೆ ತಿಳಿದಿರಲಿಲ್ಲ ಎಂದು ಆರೋಪಿಯು ಹೇಳಿದ್ದಾರೆ. ಅವರು ಕ್ಷಮೆಯನ್ನೂ ಕೋರಿದ್ದಾರೆ ಎಂದು ಸಮಿತಿಯು ತಿಳಿಸಿದೆ.</p>.<p>‘ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿರುವ ಪ್ರಚೋದನಕಾರಿ ಹೇಳಿಕೆಗಳನ್ನು ಅಳಿಸುವುದಾಗಿ ಮತ್ತು ಕ್ಷಮಾಪಣೆಯ ಹೇಳಿಕೆಯನ್ನು ಪ್ರಕಟಿಸುವುದಾಗಿ ಆರೋಪಿಯು ಭರವಸೆ ನೀಡಿದ್ದಾರೆ’ ಎಂದು ಸಮಿತಿಯ ಅಧ್ಯಕ್ಷ ಶಾಸಕ ರಾಘವ ಚಡ್ಡಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>