ಬೆಂಗಳೂರು: ‘ಮೀನು ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡೋ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ರಾಹುಲ್ ಗಾಂಧಿ ಮತ್ತೊಂದು ಕಡೆ’ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಟ್ವಿಟರ್ನಲ್ಲಿ ವ್ಯಂಗ್ಯವಾಡಿದ್ದಾರೆ.
ಮೂರನೇ ದಿನ ಕಾಂಗ್ರೆಸ್ ‘ಜನಾಶೀರ್ವಾದ ಯಾತ್ರೆ’ಯಲ್ಲಿ ಪಾಲ್ಗೊಂಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಯಚೂರಿನಲ್ಲಿ ಸೋಮವಾರ ನರಸಿಂಹ ಸ್ವಾಮಿಯ ದೇವಾಲಯಕ್ಕೆ ಭೇಟಿ ನೀಡಿದರು.