<p>ವದಂತಿಗಳಿಂದ ಸೃಷ್ಟಿಯಾಗುವ ಆತಂಕ, ಅದರಿಂದ ಜನರು ಆತುರದಲ್ಲಿ ಮಾಡಿಕೊಳ್ಳುವ ಎಡವಟ್ಟುಗಳು ಒಂದೊಂದಲ್ಲ.</p><p>ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹೊತ್ತಲ್ಲಿ ಭಾರತದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಅದರೆ, ಅದಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಊಹಾಪೋಹಗಳಿಂದ ಜನರು, ಇನ್ನುಮುಂದೆ ತೈಲ ಸಿಗುವುದೇ ಇಲ್ಲವೇನೋ ಎಂಬಂತೆ ಕೆಲವೆಡೆ 'ರಿಯಾಕ್ಟ್' ಮಾಡುತ್ತಿದ್ದಾರೆ.</p><p>ಪೆಟ್ರೋಲ್, ಡೀಸೆಲ್ ಸಂಗ್ರಹಿಸಿಟ್ಟುಕೊಳ್ಳಲು ಮನೆಯಲ್ಲಿರುವ ಪಾತ್ರೆಗಳು, ನೀರಿನ ಟ್ಯಾಂಕರ್ಗಳು, ಬಕೆಟ್ಗಳನ್ನು ಹಿಡಿದು ಪೆಟ್ರೊಲ್ ಬಂಕ್ಗಳ ಎದುರು ಜಮಾಯಿಸಿರುವ ಚಿತ್ರಗಳು, ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.</p><p>ಗುಜರಾತ್, ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಜನರು ಪೆಟ್ರೋಲ್ ಬಂಕ್ಗಳ ಎದುರು ಮುಗಿಬಿದ್ದಿರುವ ಪ್ರಕರಣಗಳು ವರದಿಯಾಗಿವೆ.</p><p>ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸುತ್ತಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.</p><p>ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಮೊಹಮ್ಮದ್ ಝುಬೈರ್, 'ಗುಜರಾತ್ನ ಕೆಲವು ಭಾಗಗಳಲ್ಲಿ ಜನರು ಪೆಟ್ರೋಲ್ ಮತ್ತು ಡೀಸೆಲ್ ಸಂಗ್ರಹಿಸಲು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್ಗಳು, ಬಕೆಟ್ ಸೇರಿದಂತೆ ಇತ್ಯಾದಿ ವಸ್ತುಗಳನ್ನು ಪೆಟ್ರೋಲ್ ಬಂಕ್ಗಳಿಗೆ ತರುತ್ತಿದ್ದಾರೆ' ಎಂದು ಹೇಳಿದ್ದಾರೆ.</p><p>ಏತನ್ಮಧ್ಯೆ, ಸರ್ಕಾರಿ ಸ್ವಾಮ್ಯದ ಭಾರತ್ ಪೆಟ್ರೋಲಿಯಂ ಬುಧವಾರ ಹೇಳಿಕೆ ಬಿಡುಗಡೆ ಮಾಡಿದೆ. 'ಪೆಟ್ರೋಲ್, ಡೀಸೆಲ್ ಕೊರತೆಯ ಬಗ್ಗೆ ಹರಿದಾಡುತ್ತಿರುವ ವದಂತಿಗಳು ಸಂಪೂರ್ಣವಾಗಿ ಆಧಾರರಹಿತವಾದವು. ದೇಶದಲ್ಲಿ ಸಾಕಷ್ಟು ಇಂಧನ ಲಭ್ಯವಿದೆ. ಪೂರೈಕೆ ಸರಪಳಿಯು, ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ಕಾರ್ಯನಿರ್ವಹಿಸುತ್ತಿದೆ' ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವದಂತಿಗಳಿಂದ ಸೃಷ್ಟಿಯಾಗುವ ಆತಂಕ, ಅದರಿಂದ ಜನರು ಆತುರದಲ್ಲಿ ಮಾಡಿಕೊಳ್ಳುವ ಎಡವಟ್ಟುಗಳು ಒಂದೊಂದಲ್ಲ.</p><p>ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹೊತ್ತಲ್ಲಿ ಭಾರತದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಅದರೆ, ಅದಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಊಹಾಪೋಹಗಳಿಂದ ಜನರು, ಇನ್ನುಮುಂದೆ ತೈಲ ಸಿಗುವುದೇ ಇಲ್ಲವೇನೋ ಎಂಬಂತೆ ಕೆಲವೆಡೆ 'ರಿಯಾಕ್ಟ್' ಮಾಡುತ್ತಿದ್ದಾರೆ.</p><p>ಪೆಟ್ರೋಲ್, ಡೀಸೆಲ್ ಸಂಗ್ರಹಿಸಿಟ್ಟುಕೊಳ್ಳಲು ಮನೆಯಲ್ಲಿರುವ ಪಾತ್ರೆಗಳು, ನೀರಿನ ಟ್ಯಾಂಕರ್ಗಳು, ಬಕೆಟ್ಗಳನ್ನು ಹಿಡಿದು ಪೆಟ್ರೊಲ್ ಬಂಕ್ಗಳ ಎದುರು ಜಮಾಯಿಸಿರುವ ಚಿತ್ರಗಳು, ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.</p><p>ಗುಜರಾತ್, ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಜನರು ಪೆಟ್ರೋಲ್ ಬಂಕ್ಗಳ ಎದುರು ಮುಗಿಬಿದ್ದಿರುವ ಪ್ರಕರಣಗಳು ವರದಿಯಾಗಿವೆ.</p><p>ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸುತ್ತಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.</p><p>ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಮೊಹಮ್ಮದ್ ಝುಬೈರ್, 'ಗುಜರಾತ್ನ ಕೆಲವು ಭಾಗಗಳಲ್ಲಿ ಜನರು ಪೆಟ್ರೋಲ್ ಮತ್ತು ಡೀಸೆಲ್ ಸಂಗ್ರಹಿಸಲು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್ಗಳು, ಬಕೆಟ್ ಸೇರಿದಂತೆ ಇತ್ಯಾದಿ ವಸ್ತುಗಳನ್ನು ಪೆಟ್ರೋಲ್ ಬಂಕ್ಗಳಿಗೆ ತರುತ್ತಿದ್ದಾರೆ' ಎಂದು ಹೇಳಿದ್ದಾರೆ.</p><p>ಏತನ್ಮಧ್ಯೆ, ಸರ್ಕಾರಿ ಸ್ವಾಮ್ಯದ ಭಾರತ್ ಪೆಟ್ರೋಲಿಯಂ ಬುಧವಾರ ಹೇಳಿಕೆ ಬಿಡುಗಡೆ ಮಾಡಿದೆ. 'ಪೆಟ್ರೋಲ್, ಡೀಸೆಲ್ ಕೊರತೆಯ ಬಗ್ಗೆ ಹರಿದಾಡುತ್ತಿರುವ ವದಂತಿಗಳು ಸಂಪೂರ್ಣವಾಗಿ ಆಧಾರರಹಿತವಾದವು. ದೇಶದಲ್ಲಿ ಸಾಕಷ್ಟು ಇಂಧನ ಲಭ್ಯವಿದೆ. ಪೂರೈಕೆ ಸರಪಳಿಯು, ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ಕಾರ್ಯನಿರ್ವಹಿಸುತ್ತಿದೆ' ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>