‘ಕನ್ನಡ ನುಡಿ, ಸಾಹಿತ್ಯ, ಪರಂಪರೆಯ ಸಂಶೋಧನೆಗಾಗಿ ಮೀಸಲಾದ ಏಕೈಕ ವಿಶ್ವವಿದ್ಯಾಲಯವಿದು. ವರ್ಷಕ್ಕೆ ₹ 6 ಕೋಟಿ ಅನುದಾನದ ಅಗತ್ಯವಿದ್ದರೂ ರಾಜ್ಯ ಸರ್ಕಾರ ಈ ವರ್ಷ ಕೇವಲ ₹ 50 ಲಕ್ಷ ಅನುದಾನ ನೀಡಿದೆ. ಈ ಸಂಸ್ಥೆಯ ಗುತ್ತಿಗೆ ನೌಕರರಿಗೆ ಸಂಬಳ ಕೊಡಲೂ ಸಾಧ್ಯವಾಗದ ಸ್ಥಿತಿಯನ್ನು ವಿಶ್ವವಿದ್ಯಾಲಯ ಎದುರಿಸುತ್ತಿದೆ. ಹೀಗಿರುವಾಗ ಸಂಶೋಧನಾ ಕಾರ್ಯಗಳನ್ನು ನಡೆಸುವುದಾದರೂ ಹೇಗೆ’ ಎಂದು ಅವರು ಪ್ರಶ್ನಿಸಿದ್ದಾರೆ.