<p class="title"><strong>ಕೊಚ್ಚಿ</strong>: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕುರಿತಂತೆ ವಿಡಂಬನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ಹೆಸರಾಂತ ಕವಿ ಕೆ.ಸಚ್ಚಿದಾನಂದನ್ ಅವರ ಫೇಸ್ಬುಕ್ ಖಾತೆಯನ್ನು ಅಮಾನತ್ತಿನಲ್ಲಿ ಇಡಲಾಗಿದೆ.</p>.<p class="title">‘24 ಗಂಟೆ ನಾನು ಯಾವುದೇ ಪೋಸ್ಟ್ ಕುರಿತು ಲೈಕ್ ಮಾಡುವಂತಿಲ್ಲ, ಅಭಿಪ್ರಾಯ ಹಾಕುವಂತಿಲ್ಲ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ನೇರ ಚರ್ಚೆಯಲ್ಲಿ ಭಾಗವಹಿಸದಂತೆ 30 ದಿನಗಳ ನಿರ್ಬಂಧ ವಿಧಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p class="title">ಸಚ್ಚಿದಾನಂದನ್ ಅವರು ಕೇರಳ ಸಾಹಿತ್ಯ ಅಕಾಡೆಮಿಯ ಮಾಜಿ ಕಾರ್ಯದರ್ಶಿ. ‘ನಾನು ಬಿಜೆಪಿ ಪರಾಭವ ಕುರಿತು ವಿಡಂಬನಾತ್ಮಕ ವಿಡಿಯೊ ಹಂಚಿಕೊಳ್ಳಲು ಬಯಸಿದಾಗ, ನಿಯಮ ಉಲ್ಲಂಘನೆ ಆಗಿದೆ ಎಂಬಂತೆ ಫೇಸ್ಬುಕ್ನಿಂದ ಒಂದು ಸಂದೇಶ ಬಂದಿತು. ಸಾಕಷ್ಟು ಹಂಚಿಕೆಯಾಗಿರುವ ಆ ವಿಡಿಯೋ ನಿಂದನಾತ್ಮಕವಾಗಿರಲಿಲ್ಲ’ ಎಂದು ತಿಳಿಸಿದರು.</p>.<p class="title">ಜಾಲತಾಣಗಳಲ್ಲಿ ಬಲಪಂಥೀಯ ಚಿಂತಕರ ನಡೆಗಳನ್ನು ಗಮನಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು. ಫೇಸ್ಬುಕ್ ಕ್ರಮವನ್ನು ಸಮರ್ಥಿಸಿಕೊಂಡಿರುವ ರಾಜ್ಯ ಬಿಜೆಪಿ, ‘ಎಲ್ಲದಕ್ಕೂ ಮಿತಿ ಇರುತ್ತದೆ. ಸಾಮಾಜಿಕ ಜಾಲತಾಣಗಳ ಸಮುದಾಯ ಮಾನದಂಡಗಳನ್ನು ಉಲ್ಲಂಘಿಸಲು ಯಾರಿಗೂ ಅವಕಾಶ ಇರುವುದಿಲ್ಲ’ ಎಂದು ಹೇಳಿದೆ.</p>.<p class="title">ಫೇಸ್ಬುಕ್ ಕ್ರಮವನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ ಮತ್ತು ಸಿಪಿಎಂ ನಾಯಕ ಟಿ.ಎಂ.ಥಾಮಸ್ ಐಸಾಕ್ ಅವರು ಟೀಕಿಸಿದ್ದಾರೆ. ‘ನಮ್ಮ ರಾಜಕಾರಣದಲ್ಲಿ ಸೆನ್ಸಾರ್ಷಿಪ್ಗೆ ಅವಕಾಶ ನೀಡಬಾರದು’ ಎಂದು ಐಸಾಕ್ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೊಚ್ಚಿ</strong>: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕುರಿತಂತೆ ವಿಡಂಬನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ಹೆಸರಾಂತ ಕವಿ ಕೆ.ಸಚ್ಚಿದಾನಂದನ್ ಅವರ ಫೇಸ್ಬುಕ್ ಖಾತೆಯನ್ನು ಅಮಾನತ್ತಿನಲ್ಲಿ ಇಡಲಾಗಿದೆ.</p>.<p class="title">‘24 ಗಂಟೆ ನಾನು ಯಾವುದೇ ಪೋಸ್ಟ್ ಕುರಿತು ಲೈಕ್ ಮಾಡುವಂತಿಲ್ಲ, ಅಭಿಪ್ರಾಯ ಹಾಕುವಂತಿಲ್ಲ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ನೇರ ಚರ್ಚೆಯಲ್ಲಿ ಭಾಗವಹಿಸದಂತೆ 30 ದಿನಗಳ ನಿರ್ಬಂಧ ವಿಧಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p class="title">ಸಚ್ಚಿದಾನಂದನ್ ಅವರು ಕೇರಳ ಸಾಹಿತ್ಯ ಅಕಾಡೆಮಿಯ ಮಾಜಿ ಕಾರ್ಯದರ್ಶಿ. ‘ನಾನು ಬಿಜೆಪಿ ಪರಾಭವ ಕುರಿತು ವಿಡಂಬನಾತ್ಮಕ ವಿಡಿಯೊ ಹಂಚಿಕೊಳ್ಳಲು ಬಯಸಿದಾಗ, ನಿಯಮ ಉಲ್ಲಂಘನೆ ಆಗಿದೆ ಎಂಬಂತೆ ಫೇಸ್ಬುಕ್ನಿಂದ ಒಂದು ಸಂದೇಶ ಬಂದಿತು. ಸಾಕಷ್ಟು ಹಂಚಿಕೆಯಾಗಿರುವ ಆ ವಿಡಿಯೋ ನಿಂದನಾತ್ಮಕವಾಗಿರಲಿಲ್ಲ’ ಎಂದು ತಿಳಿಸಿದರು.</p>.<p class="title">ಜಾಲತಾಣಗಳಲ್ಲಿ ಬಲಪಂಥೀಯ ಚಿಂತಕರ ನಡೆಗಳನ್ನು ಗಮನಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು. ಫೇಸ್ಬುಕ್ ಕ್ರಮವನ್ನು ಸಮರ್ಥಿಸಿಕೊಂಡಿರುವ ರಾಜ್ಯ ಬಿಜೆಪಿ, ‘ಎಲ್ಲದಕ್ಕೂ ಮಿತಿ ಇರುತ್ತದೆ. ಸಾಮಾಜಿಕ ಜಾಲತಾಣಗಳ ಸಮುದಾಯ ಮಾನದಂಡಗಳನ್ನು ಉಲ್ಲಂಘಿಸಲು ಯಾರಿಗೂ ಅವಕಾಶ ಇರುವುದಿಲ್ಲ’ ಎಂದು ಹೇಳಿದೆ.</p>.<p class="title">ಫೇಸ್ಬುಕ್ ಕ್ರಮವನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ ಮತ್ತು ಸಿಪಿಎಂ ನಾಯಕ ಟಿ.ಎಂ.ಥಾಮಸ್ ಐಸಾಕ್ ಅವರು ಟೀಕಿಸಿದ್ದಾರೆ. ‘ನಮ್ಮ ರಾಜಕಾರಣದಲ್ಲಿ ಸೆನ್ಸಾರ್ಷಿಪ್ಗೆ ಅವಕಾಶ ನೀಡಬಾರದು’ ಎಂದು ಐಸಾಕ್ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>